ಬೆಂಗಳೂರು : ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ (ಮಿಲೇಟ್ಸ್) ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಮೇಳಕ್ಕೆ ಒಡಿಶಾ, ಕೇರಳ, ಅರಬ್, ಜಪಾನ್ ದೇಶಗಳಿಂದಲೂ ಉದ್ಯಮಿಗಳು ಮೇಳಕ್ಕೆ ಆಗಮಿಸಿದ್ದಾರೆ. ಸರಕಾರಿ, ಖಾಸಗಿ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನಕ್ಕಾಗಿ 250ಕ್ಕೂ ಹೆಚ್ಚಿನ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಪ್ರದರ್ಶನಕ್ಕಾಗಿ ಪ್ರತ್ಯೇಕ 100 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮೇಳದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ, ರೈತರ ಕಾರ್ಯಾಗಾರ ಆಯೋಜಿಸಲಾಗಿದೆ.