ಬೆಂಗಳೂರು: ಇಂದು ಬೆಂಗಳೂರು ನಗರದ 117 ಕೇಂದ್ರಗಳಲ್ಲಿ 545 ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಾ ಮುತ್ತಾ 200 ಮೀಟರ್ ವ್ಯಾಪ್ತಿಯಲ್ಲಿ (144 ಸೆಕ್ಷನ್) ನಿಷೇಧಾಜ್ಙೆ ಜಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶಿಸಿದ್ದಾರೆ.
ಪರೀಕ್ಷೆ ವೇಳೆ ಯಾವುದೇ ಪರೀಕ್ಷಾ ಅಕ್ರಮ ಚಟುವಟಿಕೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲಾ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಶಾಪ್ ಗಳನ್ನು ಕ್ಲೋಸ್ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯೋವರೆಗೂ ಜೆರಾಕ್ಸ್ ಶಾಪ್ ಗಳನ್ನ ಮುಚ್ಚುವಂತೆ ಆದೇಶ ಮಾಡಲಾಗಿದೆ.
ಪಿಎಸ್ಐ ನೇರ ನೇಮಕಾತಿ ಪರೀಕ್ಷೆ ಹಿನ್ನೆಲೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದೆ. ರಾಜ್ಯದ ಎಲ್ಲಾ ಅಭ್ಯರ್ಥಿಗಳಿಗೂ ಬೆಂಗಳೂರಿನಲ್ಲೇ ಎಕ್ಸಾಂ ಇದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಪರೀಕ್ಷಾ ಅಭ್ಯರ್ಥಿಗಳಿಗಿರುವ ಸೂಚನೆಗಳು ಇಂತಿವೆ.
ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ :-
- ಪೂರ್ಣ ತೋಳಿನ ಅಂಗಿಗಳನ್ನ ಧರಿಸದಂತೆ ಸೂಚನೆ
- ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಬಳಸಲು ಸೂಚನೆ
- ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ ಗಳಿಗೆ ಅನುಮತಿ ಇಲ್ಲ
- ಶರ್ಟ್ ಅಥವಾ ಪ್ಯಾಂಟ್ ಗಳಿಗೆ ಜಿಪ್ ಪ್ಯಾಕೆಟ್ ಗಳು, ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರಬಾರದು
- ಪರೀಕ್ಷಾ ಹಾಲ್ ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ
- ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ
- ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸುವಂತಿಲ್ಲ
ಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ :-
- ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ
- ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
- ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು
- ಇನ್ನೊಬ್ಬರಿಗೆ ಮುಜುಗರವಾದ ಟಾಪ್ ಗಳು ಬಳಸಲು ಸೂಚನೆ
- ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ
- ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸುವಂತಿಲ್ಲ
- ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ
ಎಲ್ಲಾ ಅಭ್ಯರ್ಥಿಗಳಿಗೂ ಈ ಕೆಳಗಿನ ವಸ್ತುಗಳು ಬಳಸದಂತೆ ಸೂಚನೆ:-
- ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಹಾಲ್ ಗೆ ನೋ ಎಂಟ್ರಿ
- ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ
- ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇರುತ್ತೆ
- ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ
- ಅಭ್ಯರ್ಥಿಗಳಿಗೆ ಹ್ಯಾಟ್ ಧರಿಸದಂತೆ ಸೂಚನೆ
- ಎಲ್ಲರಿಗೂ ಮಾಸ್ಕ್ ಧರಿಸದಂತೆ ಸೂಚನೆ
ಈ ಕೆಳಗಿನ ಪತ್ರ ತರಲು ಅನುಮತಿ :-
- ಪ್ರವೇಶ ಪತ್ರ ಕಡ್ಡಾಯವಾಗಿ ತರಲು ಸೂಚನೆ
- ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ
- ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್ ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ