ಮಂಗಳೂರು : ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ನೇಮಕ ವಿಚಾರವಾಗಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರ ಇರಬೇಕಾದರೆ ಪ್ರತಿಷಕ್ಷ ಪ್ರಬಲವಾಗಿರಬೇಕು
ಪ್ರತಿಪಕ್ಷ ನಾಯಕನಿಲ್ಲದೆ ಪ್ರತಿಪಕ್ಷ ಕುಂಠಿತವಾಗಿತ್ತು. ಈಗ ಸಮರ್ಥ ನಾಯಕ ಬಂದಿದ್ದಾರೆ. ರಾಜ್ಯದ ಅಭಿವೃದ್ಧಿ ಗೆ ಪೂರಕವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಹಿಂದೂ ಕಾರ್ಯಕರ್ತರ ಗಡಿಪಾರು ಒಪ್ಪತಕ್ಕಂತ ಮಾತಲ್ಲ ಅಂತಹ ವಿಚಾರಗಳು ನಡೆಯಬಾರದು
ಸರ್ಕಾರ ಎಲ್ಲರಿಗೂ ಸಂಬಂಧಪಟ್ಟದ್ದು ಸರ್ಕಾರಕ್ಕೆ ಎಲ್ಲರೂ ಸಮಾನರು. ಒಂದು ಗುಂಪು ಟಾರ್ಗೆಟ್ ಮಾಡಿದ್ದರೆ ಅದು ಶೋಭೆ ತರುವಂತಹದ್ದಲ್ಲ ಎಂದು ಮಂಗಳೂರಿನಲ್ಲಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ