ವಿಶ್ವವಿಖ್ಯಾತ ಮೈಸೂರು ( dasara ) ದಸರಾ ಮಹೋತ್ಸವ 2022ಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆ ಅರಮನೆ ನಗರಿ ಮೈಸೂರಿನಲ್ಲಿ ಸಿದ್ದತೆಗಳು ಜೋರಾಗಿವೆ. ದಸರಾ ಸಮಯದಲ್ಲಿ ಮೈಸೂರಿಗೆ ದೂರದೂರಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಬರುತ್ತಾರೆ.
ಹೀಗಾಗಿ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಏಕೀಕೃತ ಟಿಕೇಟ್ (ಕಾಂಬೋ ಟಿಕೆಟ್) ವ್ಯವಸ್ಥೆ ಜಾರಿ ಮಾಡಿದೆ. ಮೈಸೂರಿನ ಕೆಲವು ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ ಮಾಡಿದೆ. ಇದನ್ನೂ ಓದಿ : – ರಾಜಕೀಯ ಪಕ್ಷಗಳ ಬೇಕಾಬಿಟ್ಟಿ ದೇಣಿಗೆ ಸಂಗ್ರಹಕ್ಕೆ ಕಡಿವಾಣ ಹಾಕಲು ಮುಂದಾದ ಚುನಾವಣಾ ಆಯೋಗ
ಕಾಂಬೋ ಟಿಕೆಟ್ ಮೂಲಕ ಪ್ರವಾಸಿಗರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್ಎಸ್ ಬೃಂದಾವನ ಸೇರಿ ಒಟ್ಟು ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು. ಇನ್ನು ಕಾಂಬೊ ಟಿಕೆಟ್ ಪಡೆದವರು ಈ ಐದು ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟಾಗ ಸರತಿಯಲ್ಲಿ ನಿಲ್ಲುವ ಅವಶ್ಯಕತೆ ಇರಿವುದಿಲ್ಲ. ಈಗಾಗಲೇ ಕಾಂಬೊ ಟಿಕೆಟ್ ಪಡೆದಿರುವುದರಿಂದ ಅವರು ಡೈರೆಕ್ಟ್ ಆಗಿ ಪ್ರವೇಶಿಸಬಹುದು. ಈ ವ್ಯವಸ್ಥೆ ಸೆಪ್ಟೆಂಬರ್ 20ರಂದು ಆರಂಭಗೊಂಡು ಅಕ್ಟೋಬರ್ 5ರವರೆಗೆ ಚಾಲ್ತಿಯಲ್ಲಿರುತ್ತದೆ.
ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ 250 ರೂ. ನಿಗದಿಪಡಿಸಲಾಗಿದೆ. ಈ ಟಿಕೆಟ್ ಗಳನ್ನು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದ್ದು, ನಗರದ ಕೆಎಸ್ಟಿಡಿಸಿ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆಎಸ್ಆರ್ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 2 ಕಡೆ, ಚಾಮುಂಡಿಬೆಟ್ಟ, ಮೃಗಾಲಯ, ಕೆಆರ್ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್ ಗಳಲ್ಲಿ ಟಿಕೆಟ್ ದೊರೆಯಲಿದೆ.
ಇದನ್ನೂ ಓದಿ : – ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಜಗಳ – ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ