ನಾಳೆ ಹಾಗೂ ನಾಡಿದ್ದು ಬಿಜೆಪಿಯ ಪ್ರಮುಖ ನಾಯಕರು ಸಂಘಪರಿವಾದ ಜೊತೆ ಸಭೆ ನಡೆಸಲಿದ್ದಾರೆ. ಬಿಜೆಪಿ ನಾಯಕರ ಜೊತೆಗೆ ಸಂಘದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಎರಡು ದಿನಗಳ ಕಾಲ ರಹಸ್ಯ ಸಭೆಗೆ ಬಿಜೆಪಿ ನಾಯಕರು ಸಿದ್ದತೆ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ (Basavaraj bommai) , ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ (Arun singh) , ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalinkumarkateel) ಹಾಗೂ ಸಂಘದ ಪ್ರಮುಖರು , ಸಚಿವರು ಸೇರಿದಂತೆ ಹಿರಿಯರು ನಾಯಕರು ಎರಡು ದಿನ ನಡೆಯಲಿರುವ ರಹಸ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಂತರಿಕ ಸಮೀಕ್ಷೆಗೆ ರಾಜ್ಯ ಬಿಜೆಪಿ ನಾಯಕರು ಕಂಗೆಟ್ಟಿದ್ದಾರೆ. ಇದನ್ನು ಓದಿ : – BREAKING NEWS – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಸಿದ್ದರಾಮಯ್ಯ (Siddaramaiah) ಉತ್ಸವಕ್ಕೆ ಟಾಂಗ್ ಕೊಡಲು ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ ಒಂದು ವರ್ಷದಲ್ಲಿ ಆಡಳಿತಾತ್ಮಕ ವ್ಯವಸ್ಥೆ ಬದಲಾವಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯ ಪೂರ್ವ ತಯಾರಿ ಬಗ್ಗೆ ಸಂಘ ಪರಿವಾರದ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಇದನ್ನು ಓದಿ : – ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್