ಇಸುದಾನ್ ಗಢ್ವಿ ಅವರನ್ನು ಗುಜರಾತ್ CM ಅಭ್ಯರ್ಥಿ ಎಂದು ಎಎಪಿ ಘೋಷಿಸಿದೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( ARVIND KERIGIWAL ) ಘೋಷಿಸಿದ್ದಾರೆ.
ಇಸುದಾನ್ ಗಢ್ವಿ ಎಎಪಿಯ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇವರು ಪತ್ರಕರ್ತರಾಗಿದ್ದು 2021 ರಲ್ಲಿ ಎಎಪಿಗೆ ಸೇರಿದ್ದರು. ಗಾಢ್ವಿ ಅವರು ಆರಂಭದಲ್ಲಿ ದೂರದರ್ಶನದಲ್ಲಿ ಕೆಲಸ ಮಾಡಿದ್ದರು. ನಂತರ ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಅವರು ಗುಜರಾತ್ನ ಡ್ಯಾಂಗ್ ಜಿಲ್ಲೆಯಲ್ಲಿ ಅರಣ್ಯನಾಶದ 150 ಕೋಟಿ ಹಗರಣದ ಬಗ್ಗೆ ಬಹಿರಂಗಪಡಿಸಿದ್ದರು. ಇದನ್ನೂ ಓದಿ : – 500 ಕೋಟಿ ರೂ. ಬಜೆಟ್ ನ ‘ಆದಿಪುರುಷ್’ ಚಿತ್ರಕ್ಕೆ ರೀಶೂಟ್ – ಮತ್ತೆ ಹೆಚ್ಚಿದ ಪ್ರಭಾಸ್ ಸಿನಿಮಾ ಬಜೆಟ್
ಎಎಪಿ ಮತಗಳಿಕೆ ಶೇ.24 ಮೀರಬಾರದು- ಅಮಿತ್ ಶಾ ಎಚ್ಚರಿಕೆ
ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಈ ಬಾರಿ ಎಎಪಿ ಸ್ಪರ್ಧೆಯೊಂದಿಗೆ ತೀವ್ರ ಕುತೂಹಲ ಮೂಡಿಸಿದೆ. ಸುಮಾರು 27 ವರ್ಷಗಳಿಂದಲೂ ಇಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಅಧಿಕಾರ ಅನುಭವಿಸುತ್ತಾ ಬಂದಿದೆ. ಗುಜರಾತ್ ( GUJURATH ) ನಲ್ಲಿ ಬಿಜೆಪಿ 122 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ, ಸಾಂಪ್ರಾದಾಯಿಕ ಕಾಂಗ್ರೆಸ್ ಮತಗಳನ್ನು ಎಎಪಿ ಸೆಳೆದುಕೊಂಡರೆ ಮಾತ್ರ ಇದು ಸಾಧ್ಯ. ಇಲ್ಲವಾದರೆ ಅದು ಕಷ್ಟಸಾಧ್ಯ ಎನ್ನಲಾಗುತ್ತಿದೆ. ಎಎಪಿ ಮತಗಳಿಕೆಯಲ್ಲಿ ಶೇ. 24 ಮೀರಬಾರದು ಎಂದು ಅಮಿತ್ ಶಾ ( AMITH SHAH )ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಎಎಪಿ ಕಾಂಗ್ರೆಸ್ ಗಿಂತ ಹೆಚ್ಚಿನ ಸವಾಲುವೊಡ್ಡಲಿದೆ ಅಮಿತ್ ಶಾ ತಿಳಿದಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದೆ. ಗುಜರಾತ್ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ : – ಕೂಡಲ ಸಂಗಮದಲ್ಲಿ ಮೃತ್ತಿಕೆ ಸಂಗ್ರಹಿಸಿದ ರಾಜ್ಯದ ಸಚಿವರ ತಂಡ…