ಬೆಂಗಳೂರಿನಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿ (Bangalore) ನಲ್ಲಿ ಕಳೆದ ನಾಲ್ಕು ದಿನಗಳಿಂದ ಸಾವಿರಾರು ಅಂಗನವಾಡಿ ಕಾರ್ಯಕರ್ತೆ (Anganwadi teachers) ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಮೈ ಕೊರೆಯುವ ಚಳಿಯಲ್ಲಿ ಮಹಿಳೆಯರು ಪರದಾಡುತ್ತಿದ್ದಾರೆ. ನಿನ್ನೆ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಮತ್ತೆ ಮಹಿಳೆಯರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಸ್ಥಳಕ್ಕೆ ಬಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ. ನಮಗೆ ಲಿಖಿತ ರೂಪದಲ್ಲಿ ಬರೆದು ಕೊಡಬೇಕು ಇಲ್ಲಾಂದ್ರೆ ಇಲ್ಲಿಂದ ಹೋಗಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ನಿನ್ನೆ ಎಂಟು ಬಿಎಂಟಿಸಿ ಬಸ್ (BMTC bus) ನಲ್ಲಿ ಮಹಿಳೆಯರನ್ನು ಪೊಲೀಸರು (Police)  ವಶಕ್ಕೆ ಪಡೆದಿದ್ದರು. ಈಗಾಗಲೇ ನಿನ್ನೆ ನೀಲಮ್ಮ ಸಹಾಯಕಿ ( ಶಿಕಾರಿಪುರದ ಅಂಗನವಾಡಿ ಸಹಾಯಕಿ) ಪ್ರಾಣ ಬಿಟ್ಟಿದ್ದಾರೆ. ಬುಧವಾರ ಪ್ರತಿಭಟನೆಗೆ ಬಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ವಾಪಸ್ಸು ಹೋಗಿದ್ದ ನೀಲಮ್ಮ ನಿನ್ನೆ ಪ್ರಾಣ ಬಿಟ್ಟಿದ್ರು. ಪೋಲಿಸರ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ :- ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿಜಯಪುರ ಜಿಲ್ಲಾ ಪ್ರವಾಸ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!