ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತ (LOKAYUKTHA)ರನ್ನು ನೇಮಕ ಮಾಡಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ (BS PATIL) ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.
ಬಿಎಸ್ ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVARAJ BOMMAI) ಮಾಡಿದ್ದ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಬಿಎಸ್ ಪಾಟೀಲ್ ಅವರು 2019ರ ನವೆಂಬರ್ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ – ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್. ಪಾಟೀಲ್ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು.
ಇದನ್ನೂ ಓದಿ – ಇದು ಮಹಾ ಜುಮ್ಮಾಗಳ ಸರ್ಕಾರ – ED ವಿಚಾರಣೆಯಿಂದ ಹೊರಬರುತ್ತಿದ್ದಂತೆಯೇ ಮೋದಿ ವಿರುದ್ದ ರಾಹುಲ್ ಗಾಂಧಿ ಟ್ವೀಟ್