ನಟ ಪ್ರಭಾಸ್ (Prabhas) ನಟಿಸಿರುವ ‘ಆದಿಪುರುಷ್ ಸಿನಿಮಾ (Adhipurush movie) ದಲ್ಲಿ ರಾಮಾಯಣ (Ramayana) ಕ್ಕೆ ಅಪಮಾನ ಮಾಡಿದ್ದಾರೆಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗುತ್ತಿದೆ.
ಟೀಸರ್ (Teaser) ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾ ಬೆನ್ನು ಬಿದ್ದಿದ್ದಾರೆ. ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವ (Home minister) ರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನ್ಯಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ :- 6ನೇ ದಿನವೂ ಹೌಸ್ ಫುಲ್ ಕಂಡ ಕಾಂತಾರ – ಗೆಲುವಿನ ನಗೆ ಬೀರಿದ ರಿಷಬ್ ಶೆಟ್ಟಿ
ಆದಿ ಪುರುಷ್ ಟೀಸರ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಪ್ರಭಾಸ್ ಕೂಡ ಕೋಪ ಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭ ಮುಗಿದ ನಂತರ ನಿರ್ದೇಶಕರನ್ನು ತಮ್ಮ ರೂಮ್ ಗೆ ಕರೆದು ಬೈದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಸೈಫ್ ಅಲಿ ಖಾನ್ ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾವಣನ ರೀತಿಯಲ್ಲಿ ಅವರು ಕಾಣುತ್ತಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.
ಇದನ್ನೂ ಓದಿ :- ಬರೋಬ್ಬರಿ 48 ಕೋಟಿ ಮೊತ್ತದ ಐಷಾರಾಮಿ ಅಪಾರ್ಟ್ ಮೆಂಟ್ ಖರೀದಿಸಿದ ಮಾಧುರಿ ದೀಕ್ಷಿತ್