2A ಮೀಸಲಾತಿಗಾಗಿ ಕೂಡಲಸಂಗಮದ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯಶ್ರೀ (Jaya mrutyunjaya swamiji) ಬಸವರಾಜ ಬೊಮ್ಮಾಯಿ (Basavaraj bommai) ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಕ್ಟೊಬರ್ 15ರ ಒಳಗೆ ಮೀಸಲಾತಿ ಕೊಡುತ್ತೇವೆ ಎಂದು ಯಡಿಯೂರಪ್ಪ (Yediyurappa) ನವರು ಹೇಳಿದ್ರು. ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು.
ಇಲ್ಲದಿದ್ದರೆ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೊಮ್ಮಾಯಿಯವರಿಗೆ ಹಲವು ಭಾರೀ ಮನವಿ ನೀಡಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬೊಮ್ಮಾಯಿ ಸರ್ಕಾರದಿಂದ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿ ಮೀಸಲಾತಿ ಬಗ್ಗೆ ಘೋಷಣೆ ಮಾಡಲಿ. ಹುಕ್ಕೇರಿಯಲ್ಲಿ 2 ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್ ಹೋರಾಟ ಮಾಡಲಾಗುತ್ತೆ. ರಾಜ್ಯದ ಮೂಲೆಮೂಲೆಗಳಿಂದ ಅಕ್ಟೋಬರ್ 21ರಂದು ಸುಮಾರು 3 ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದು ಹೇಳಿದ್ರು. ಸರ್ವ ಪಕ್ಷಗಳ ಸಭೆ ಕರೆದು ಹೋರಾಟಕ್ಕೆ ನ್ಯಾಯ ಕೊಡಿಸಿ. ಮೀಸಲಾತಿ ಕೊಡ್ತೀನಿ ಅಂದ್ರೆ ಯಾವಾಗ ಕೊಡ್ತೀರಿ ಅಂತ ಹೇಳಿ. ಕೊಡೊಲ್ಲ ಅಂದ್ರೆ ಅದನ್ನಾದ್ರೂ ಸ್ಪಷ್ಟವಾಗಿ ತಿಳಿಸಿ ಎಂದು ಆಗ್ರಹಿಸಿದ್ರು ಪಂಚಮಸಾಲಿ ಸಮುದಾಯದ ನಿರಂತರ ಹೋರಾಟಕ್ಕೆ ಸ್ಪಂದಿಸಿ. ಇದನ್ನೂ ಓದಿ :- ಪಾಕಿಸ್ತಾನವೇ ಮೋದಿಗೆ ಹೆದರಬೇಕಾದರೇ ಇನ್ನು ಸಿದ್ದರಾಮಯ್ಯ ಯಾವ ಲೆಕ್ಕ- ಈಶ್ವರಪ್ಪ
ಅಕ್ಟೋಬರ್ 21ರೊಳಗೆ ಸ್ಪಷ್ಟವಾದ ನಿಲುವನ್ನ ತಿಳಿಸಿ. ಇಲ್ಲವಾದ್ರೆ 25 ಲಕ್ಷಕ್ಕೂ ಹೆಚ್ಚು ಸಮುದಾಯದ ಜನ ಬೃಹತ್ ಹೋರಾಟ ಮಾಡ್ತೀವಿ. ಅಂತಿಮ ಹೋರಾಟವಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ . ಹೋರಾಟದ ದಿನಾಂಕವನ್ನ ಅಕ್ಟೋಬರ್ 21ರಂದೇ ತಿಳಿಸುತ್ತೇವೆ. ನಾವು ಹೋರಾಟದ ದಿನಾಂಕ ಘೋಷಣೆ ಮಾಡಿದ್ರೆ ಯಾವುದೇ ಕಾರಣಕ್ಕೂ ಬದಲಿಸೋದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ :- ಹಿಜಾಬ್ ಇಡೀ ಜಗತ್ತಿನಲ್ಲೇ ಚರ್ಚೆ ಆಗುತ್ತಿದೆ – ಜಗದೀಶ್ ಶೆಟ್ಟರ್