ಚಿಲುಮೆ ಸಂಸ್ಥೆ (Chilume organization) ನಡೆಸಿದ ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರ ಆರೋಪವನ್ನು ಡೈವರ್ಟ್ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker blast) ಮಾಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳೂರಿ (Mangaluru) ನಲ್ಲಿ ನಡೆದ ಕುಕ್ಕರ್ ಬ್ಲ್ಯಾಸ್ಟ್ ಪ್ರಕರಣವನ್ನು ಉಲ್ಲೇಖ ಮಾಡಿ, ಕುಕ್ಕರ್ ಬ್ಕಾಸ್ಟ್ ಅಂತೆ. ಕುಕ್ಕರ್ ಬ್ಲಾಸ್ಟ್ ಮೂಲಕ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳ್ಳತನದ ಆರೋಪವನ್ನು ಡೈವರ್ಟ್ ಮಾಡಲು ಹೊರಟಿದ್ದೀರಾ? ಭಯೋತ್ಪಾದಕ ಎಲ್ಲಿಂದ ಬಂದ? ಘಟನೆ ಆದ ಬೆನ್ನಲ್ಲೇ ಡಿಜಿಪಿ ಅವರು ಸ್ಫೋಟದ ಬಗ್ಗೆ ಟ್ವೀಟ್ ಮಾಡುತ್ತಾರೆ. ಬಿಜೆಪಿ (BJP) ಸರ್ಕಾರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ತನಿಖೆ ಮಾಡದೆ ಇದನ್ನು ಭಯೋತ್ಪಾದಕ ದಾಳಿ ಎಂದಿದ್ದಾರೆ. ಅದು ಹೇಗೆ ಸಾಧ್ಯ? ಇಲ್ಲಿ ದಿಲ್ಲಿ, ಮುಂಬೈ, ಜಮ್ಮು ಕಾಶ್ಮೀರ ಹಾಗೂ ಪುಲ್ವಾಮಾ ರೀತಿಯಲ್ಲಿ ದಾಳಿ ಆಗಿಲ್ಲ. ಆ ರೀತಿಯ ಉಗ್ರರ ದಾಳಿ ಮಂಗಳೂರಿನಲ್ಲಿ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
ಇದನ್ನು ಓದಿ : – H Vishwanath- ಬಿಜೆಪಿ ಸೇರಿ ಅಂತಾ ವಿಜಯೇಂದ್ರ ದುಡ್ಡು ಕೊಡೋಕೆ ಬಂದಿದ್ರು – ಎಚ್ ವಿಶ್ವನಾಥ್ ಹೊಸ ಬಾಂಬ್