BREAKING – ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ವಿಘ್ನ ..!

ನಟಿ ರಮ್ಯಾ ( RAMYA) ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ( SWATI MUTHINA MALE HANIYE ) ಸಿನಿಮಾ ಮೂಡಿ ಬರುತ್ತಿದೆ.

ನಟಿ ರಮ್ಯಾ ( RAMYA) ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ( SWATI MUTHINA MALE HANIYE ) ಸಿನಿಮಾ ಮೂಡಿ ಬರುತ್ತಿದೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಗಿದಿದೆ. ಆದರೆ ಈಗ ಶೀರ್ಷಿಕೆ ವಿಚಾರವಾಗಿ ಕಿರಿಕ್ ಶುರುವಾಗುವ ಸೂಚನೆ ಸಿಕ್ಕಿದೆ.

Rajendra Singh Babu Says None In The Kannada Film Industry Is Neglected! | NETTV4U

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ಆಕ್ಷೇಪ ಎತ್ತಿದ್ದಾರೆ. ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಪತ್ರದಲ್ಲಿ ಖಡಕ್ ಆಗಿ ತಿಳಿಸಿದ್ದಾರೆ.  ಇದನ್ನು ಓದಿ : – ಸಂವಿಧಾನ ಉಳಿಸಲು ಮೋದಿ ಹತ್ಯೆಗೆ ಕರೆ- ಕಾಂಗ್ರೆಸ್ ಮುಖಂಡನ ವಿರುದ್ಧ FIR

1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿತ್ತು. ಆ ಸಿನಿಮಾಗೆ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡು ಇಂದಿಗೂ ಫೇಮಸ್. ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ.

Ramya: I feel like I'm making my debut all over again- Cinema express

ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ‘ರೆಬಲ್ ಸ್ಟಾರ್’ ಅಂಬರೀಷ್ ಹಾಗೂ ಸುಹಾಸಿನಿ ಅವರು ಜೋಡಿ ಎಂಬುದು ವಿಶೇಷ. ಈ ಚಿತ್ರಕ್ಕೆ ಶೇ 80ರಷ್ಟು ಶೂಟಿಂಗ್ ಮುಗಿದಿತ್ತು. ಆದರೆ ಅಂಬರೀಷ್ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

ಇದನ್ನು ಓದಿ : – ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!