ಬೆಳಗಾವಿ (Belagavi) ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ (Bommai) ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸುವರ್ಣಸೌಧದಲ್ಲಿ ಸಭೆ ನಡೆಯಲಿದೆ. ಸದನದಲ್ಲಿ ವಿಧೇಯಕ ಮಂಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ . ವಿಪಕ್ಷಗಳನ್ನು ಕಟ್ಟಿ ಹಾಕುವ ತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ .
ಪಂಚಮಸಾಲಿ (Panchamasali) ಸಮುದಾಯದ ಪ್ರತಿಭಟನೆ ಹಿನ್ನೆಲೆಯಲ್ಲಿ ಮೀಸಲಾತಿ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಪಂಚಮಸಾಲಿ ಸಮುದಾಯದ ಬೇಡಿಕೆ ಈಡೇರಿಕೆಗೆ ಆಗ್ರಹ ಹಿನ್ನೆಲೆ ಕಾನೂನಾತ್ಮಕ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆ ಬಳಿಕ ಸಮುದಾಯಕ್ಕೆ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಗಡಿ ಸಂಬಂಧ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಮಹಾರಾಷ್ಟ್ರ (Maharastra) ಕರ್ನಾಟಕ ಗಡಿ (Karnataka border) ಯಲ್ಲಿ ಉದ್ವಿಗ್ನ ನಡೆ ಹಿನ್ನೆಲೆ ರಾಜ್ಯದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ವಿದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ಕಟ್ಟೆಚ್ಚರ ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಟೆಸ್ಟಿಂಗ್ ಪ್ರಮಾಣ,ಲಸಿಕೀಕರಣ ಹೆಚ್ಚಿಸುವ ಕುರಿತು ಸಿಎಂ ಬೊಮ್ಮಾಯಿ ಸಭೆಯಲ್ಲಿ ಚರ್ಚೆ ಮಾಡಲಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಯೋಜನೆ ಅನುಷ್ಠಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಇದನ್ನು ಓದಿ : – ಪ್ರಿಯಾಂಕ್ ಖರ್ಗೆ ಬಳಸಿದ ‘ಉಡಾಫೆ’ ಪದಕ್ಕೆ ಕೆರಳಿದ ಎಸ್.ಟಿ ಸೋಮಶೇಖರ್ – ಸದನದಲ್ಲಿ ವಾಕ್ಸಮರ