ಹುಬ್ಬಳ್ಳಿ (Hubballi) ಯ ಹೋಟೆಲ್ವೊಂದರಲ್ಲಿ ಚಾಕುವಿನಿಂದ ಇರಿದು ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ (Chandrashekar guruji) ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.
ಗುರೂಜಿ ನಮಗೆ ಮಾನಸಿಕವಾಗಿ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಅದಕ್ಕಾಗಿ ಅವರನ್ನು ಹತ್ಯೆ ಮಾಡಿದ್ದಾಗಿ ಪೊಲೀಸ್ ವಿಚಾರಣೆ ವೇಳೆ ಹಂಚಕರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಚಂದ್ರಶೇಖರ ಗುರೂಜಿ ಬಳಿಯೇ 10 ರಿಂದ12 ವರ್ಷ ಕೆಲಸ ಮಾಡಿದ್ದೇವೆ. 2016ರಲ್ಲೇ ಕೆಲಸ ಬಿಟ್ಟಿದ್ದೇವೆ. ಅಲ್ಲಿಂದ ಹೊರಬಂದ ಬಳಿಕ ನಮ್ಮ ಪಾಡಿಗೆ ನಾವು ಸ್ವಂತ ಉದ್ಯೋಗ ಮಾಡುತ್ತಾ ಜೀವನ ಸಾಗಿಸುತ್ತಿದ್ದೆವು. ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದೇವೆ. ಇದನ್ನೂ ಓದಿ : – ಚಂದ್ರಶೇಖರ್ ಗುರೂಜಿಗೆ ಬ್ಲಾಕ್ ಮೇಲ್ ಮಾಡಿ ಸುಲಿಗೆಗೆ ಇಳಿದಿದ್ರಾ ಹಂತಕರು..!
ಆದರೆ ನಮ್ಮ ಪ್ರತಿ ಕೆಲಸಕ್ಕೂ ಗುರೂಜಿ ಅಡ್ಡಗಾಲು ಹಾಕುತ್ತಿದ್ದರು. ಬದುಕುವುದಕ್ಕೂ ಬಿಡದೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಮಾನಸಿಕವಾಗಿ ಬಹಳಷ್ಟು ಕಿರುಕುಳ ನೀಡಿದ್ದಾರೆ. ನಾವು ಎಲ್ಲೇ ಯಾವುದೇ ವ್ಯವಹಾರ ಮಾಡಿದರೂ ಅವರ ಬೆಂಬಲಿಗರು ಬೆದರಿಕೆ ಹಾಕುತ್ತಿದ್ದರು. ಇವರಿಂದ ನಾವು ಹಲವು ಸಮಸ್ಯೆ ಎದುರಿಸಿದ್ದೇವೆ. ತಾಳ್ಮೆಗೆಟ್ಟು ನಾವೇ ಕೊಲೆ ಮಾಡಿದ್ದೇವೆ”ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : – ಮಣ್ಣಲ್ಲಿ ಮಣ್ಣಾದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ