ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಿಎಂ ಬಸವರಾಜ್ ಬೊಮ್ಮಾಯಿ ( basavaraj bommai ) ಇಂದು ನಡೆಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಸಂವಾದ ಇದ್ದಾಗಿದ್ದು, ಮಳೆಯಿಂದಾದ ಹಾನಿಯ ವಿವರವನ್ನು ಸಿಎಂ ಪಡೆದಿದ್ದಾರೆ. ಮಳೆಯಿಂದ ಜಿಲ್ಲೆಗಳಲ್ಲಿ ಸಂಭವಿಸಿರುವ ಮನೆಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ : – ಯುವತಿ ಜೊತೆ ಹೊಟೇಲ್ ನಲ್ಲಿ ಅನುಚಿತ ವರ್ತನೆ ಹಿನ್ನೆಲೆ – ಕೆ.ಪಿ.ಅಗ್ರಹಾರ ಇನ್ಸ್ಪೆಕ್ಟರ್ ಅಮಾನತು
ಬೆಳೆ ಹಾನಿಯ ನಿಖರ ಮಾಹಿತಿ ಪಡೆಯಲು ಅಧಿಕಾರಿಗಳಿಗೆ ನಿರ್ದೇಶನ ಹಾಗೂ ರಸ್ತೆಹಾನಿಯಿಂದ ವಾಹನ ಸಂಚಾರ ಸುಗಮವಾಗದಿದ್ದಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಬೇಕೆಂದು ಸೂಚನೆ ನೀಡಿದ್ದಾರೆ. ವಿಡಿಯೋ ಸಂವಾದದಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ : – ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ- ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಶ್ರೀರಾಮುಲು