ಕೇಂದ್ರ ಸಚಿವ ಅಮಿತ್ ಶಾ (AMIT SHAH ) ನಿನ್ನೆ ಇಡೀ ದಿನ ಸಂಚಲನ ಸೃಷ್ಟಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ. ನಿನ್ನೆ ದಿನ ಅಮಿತ್ ಶಾ ಮತ್ತಷ್ಟು ಶಕ್ತಿ ತುಂಬಿದ್ದಾರೆ ಎಂದು ಸಿಎಂ ಬೊಮ್ಮಾಯಿ (BASAVRAJ BOMMAI) ಹೇಳಿದ್ದಾರೆ.
ಹುಬ್ಬಳ್ಳಿ(HUBALLI) ಯಲ್ಲಿ ಮತಾನಡಿದ ಅವರು, ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದೀವಿ ಅಂತಾ ಫೋಸ್ ಕೊಡುತ್ತಿದ್ದಾರೆ. ಯಾರು ಏನೇ ಹೇಳಲಿ ಬಿಜೆಪಿ ಗೆಲುವು ಖಂಡಿತ ಎಂದು ಹೇಳಿದ್ರು. ಅಮಿತ್ ಶಾ ರಾಜ್ಯ ನಾಯಕರಿಗೆ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಸೂಚಿಸಿದ್ದಾರೆ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಹಾಗೂ ದ್ವೇಷ ಆಧಾರಿತ ಇಲ್ಲ. ಕಾರ್ಯಕ್ರಮದ ಮೂಲಕ ನಾವು ಚುನಾವಣೆಗೆ ಹೋಗುತ್ತಿದ್ದೇವೆ. ಇದನ್ನು ಓದಿ :- ಸತತ 13ವರ್ಷಗಳ ನಂತರ ಇಂದು ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
ಕಾಂಗ್ರೆಸ್ (CONGRESS)ಹತಾಶೆಯಾಗಿದೆ, ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗುತ್ತಿದೆ. ಯಾವತ್ತೂ ಬಳಸದ ಕೀಳುಮಟ್ಟದ ಪದಗಳನ್ನು ಅವರು ಬಳಸುತ್ತಿದ್ದಾರೆ. ನಾನು ಮಾತ್ರ ಸಂಯಮದಿಂದ ಇದ್ದೇನೆ. ಬಿ.ಎಲ್.ಸಂತೋಷ್ ಸಂಘಟನಾತ್ಮಕ ವಿಷಯವಾಗಿ ಭೇಟಿ ನೀಡುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಹೇಳಿದರು.
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಚಾರವಾಗಿ ಮಾತನಾಡಿದ ಅವರು ಸರ್ವೆ ಕಾರ್ಯ ನಡೆಯುತ್ತಿದೆ, ಆದರೆ ಯಾವುದೂ ಅಂತಿಮ ಅಲ್ಲ. ಗೋ ಬ್ಯಾಕ್ ಅಶೋಕ್ ವಿಚಾರವಾಗಿ ಮಾತನಾಡಿ ಯಾರೋ ನಾಲ್ಕ ಜನ ಮಾಡುತ್ತಾರೆ. ನೀವು ಹೈಲೆಟ್ ಮಾಡುತ್ತೀದ್ದೀರಿ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದರು.
ಇದನ್ನು ಓದಿ :- ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ…!