ತಾರಕಕ್ಕೇರಿದ ಗಡಿ ವಿವಾದ – ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ

ಇದಕ್ಕೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಯವರ ಮೇಲೆ ಹರಿಹಾಯ್ದಿದ್ದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೊಮ್ಮಾಯಿಯವರಿಗೆ ಈಗೇನು ದೆವ್ವ ಹಿಡಿದಿದೆಯೇ, ಈಗ ಗಡಿ ವಿವಾದ ಬಗ್ಗೆ ಮಾತನಾಡುತ್ತಾರೆ.

ಮಹಾರಾಷ್ಟ್ರ ( MAHARASTRA ) ಮತ್ತು ಕರ್ನಾಟಕ ( KARANATAKA ) ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿದ್ದಂತೆ, ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ( EKNATH SHINDHE ) ಹೇಳಿದ್ದಾರೆ.

ಗಡಿ ಭಾಗದಲ್ಲಿರುವ ಮರಾಠಿಗರಿಗೆ ನ್ಯಾಯ ಒದಗಿಸಲು ಸರ್ಕಾರ ಸಕಲ ಪ್ರಯತ್ನವನ್ನೂ ಮಾಡುತ್ತಿದೆ. ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯೂ ಬೇರೆಯವರ ಪಾಲಾಗಲು ನಾವು ಬಿಡುವುದಿಲ್ಲ. 40 ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. ಇದನ್ನೂ ಓದಿ : –  ನೆಚ್ಚಿನ ಶಿಕ್ಷಕರನ್ನು ಎತ್ತಿನಗಾಡಿ ಮೂಲಕ ಊರಿನಲ್ಲಿ ಮೆರವಣಿಗೆ ಮಾಡಿಸಿದ ಮಕ್ಕಳು..!

ಇದಕ್ಕೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಯವರ ಮೇಲೆ ಹರಿಹಾಯ್ದಿದ್ದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೊಮ್ಮಾಯಿಯವರಿಗೆ ಈಗೇನು ದೆವ್ವ ಹಿಡಿದಿದೆಯೇ, ಈಗ ಗಡಿ ವಿವಾದ ಬಗ್ಗೆ ಮಾತನಾಡುತ್ತಾರೆ. ಮಹಾರಾಷ್ಟ್ರದ 40 ಗ್ರಾಮಗಳು ಬೇಕೆಂದು ಈಗ ಹಠಾತ್ತಾಗಿ ಕೇಳುವ ಬೊಮ್ಮಾಯಿಯವರಿಗೆ ದೆವ್ವ ಹಿಡಿದಿದೆಯೇ ಎಂದು ಟೀಕಿಸಿದ್ದರು. ಎನ್.ಸಿ.ಪಿ ನಾಯಕ ಅಜಿತ್ ಪವಾರ್ ಕರ್ನಾಟಕಕ್ಕೆ ಸಿಎಂ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಸರಿಯಾದ ಉತ್ತರ ನೀಡಬೇಕೆಂದು ಹೇಳಿದ್ದಾರೆ. ಈ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಕೂಡ ಅಜಿತ್ ಪವಾರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : – ನಾನು ಮದುವೆ ಆಗಲ್ಲ ಎಂದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!