BIRBHUM- ಬಿರ್ಭೂಮ್‌ನಲ್ಲಿ ಮೃತಪಟ್ಟವರ ಕುಟುಂಬ ಭೇಟಿ ಮಾಡಿದ ಸಿಎಂ ಮಮತಾ ಬ್ಯಾನರ್ಜಿ- 5 ಲಕ್ಷ ಪರಿಹಾರ ಘೋಷಣೆ

ಪಶ್ಚಿಮ ಬಂಗಾಳ (WEST BENGAL )ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(MAMATHA BANARJEE) ಬಿರ್ಭೂಮ್ ಜಿಲ್ಲೆಯಲ್ಲಿ ನಡೆಡ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಎಂಟು ಜನರ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಂತ್ರಸ್ತ ಕುಟುಂಬದವರಿಗೆ ಸಿಎಂ ಮಮತಾ ಸಾಂತ್ವನ ಹೇಳಿದ್ದಾರೆ. ಪ್ರತಿಯೊಬ್ಬರಿಗೂ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೆಚ್ಚುವರಿ 50,000 ಘೋಷಿಸಿದ್ದಾರೆ. ಸಜೀವ ದಹನವಾದ ಎಂಟು ಮಕ್ಕಳ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ. ಘಟನೆಯಲ್ಲಿ ಸುಟ್ಟುಹೋದ ಮನೆಗಳನ್ನು ಮರುನಿರ್ಮಾಣ ಮಾಡಲು ಪ್ರತಿ ಮನೆಗೆ ಹೆಚ್ಚುವರಿ 2 ಲಕ್ಷ ನೀಡಲಾಗುವುದು. ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ :- UP CM YOGI – ನಾಳೆ ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ

ಪಶ್ಚಿಮ ಬಂಗಾಳದ (WEST BENGAL) ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಸಜೀವ ದಹನವಾದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಕಗ್ಗೊಲೆಗೂ ಮುನ್ನ ಮನಬಂದಂತೆ ಥಳಿಸಲಾಗಿದೆ ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಮಂಗಳವಾರ ಮುಂಜಾನೆ ಅಪರಿಚಿತರಿಂದ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾದ ಮನೆಗಳಲ್ಲಿ ದೊರೆತ ಸುಟ್ಟ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ ವಿಧಿ ವಿಜ್ಞಾನ ಪ್ರಯೋಗಾಲಯ ತಂತ್ರಜ್ಞರ ಪ್ರಕಾರ, ಸಂತ್ರಸ್ತರನ್ನು ಮೊದಲು ಮನ ಬಂದಂತೆ ಥಳಿಸಿ, ತದನಂತರ ಜೀವಂತವಾಗಿ ಸುಟ್ಟು ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಕನಿಷ್ಠ 20 ಜನರನ್ನು ಬಂಧಿಸಲಾಗಿದೆ.

ಇದನ್ನು ಓದಿ :- ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ ಮಗಳು ಸಾವು – ಸಚಿವ ಸೋಮಶೇಖರ್ ಗೆ ಸಾರ್ವಜನಿಕರು ಘೇರಾವ್ – ಸ್ಥಳದಿಂದ ಕಾಲ್ಕಿತ್ತ ಸಚಿವ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!