ಚಾಮರಾಜನಗರ ( CHAMARAJ NAGARA ) ಕ್ಕೆ ನಾನು ಮೂರನೇ ಬಾರಿ ಹೋಗುತ್ತಿದ್ದೇನೆ. 31 ಜಿಲ್ಲೆಗಳಲ್ಲಿ ಚಾಮರಾಜನಗರವು ಒಂದು ಜಿಲ್ಲೆ. ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯೇ ನನ್ನ ಗುರಿ. SC-ST ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
SC-ST ಮತ ಕಬಳಿಸಲು ಕಾಂಗ್ರೆಸ್ ( CONGRESS ) ನವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಮಹಾರಾಷ್ಟ್ರ ಗಡಿ ವಿಚಾರ ದೆಹಲಿಯಲ್ಲಿ ಚರ್ಚೆಯಾಗುತ್ತದೆ. ಗೃಹ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚೆ ಮಾಡುತ್ತೇವೆ. ಮಹಾರಾಷ್ಟ್ರ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಮಹದಾಯಿ ಮತ್ತು ಕೃಷ್ಣ ವಿಚಾರದಲ್ಲಿ ಕಾಂಗ್ರೆಸ್ ನ ಪಾತ್ರ ಏನು ಎಂಬುದು ಜನರಿಗೆ ಗೊತ್ತಿದೆ. ಗೋವಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಯಾವ ನಿಲುವುಗಳನ್ನು ತೆಗೆದುಕೊಂಡರು ಎಂಬುದನ್ನ ಜನರು ಮರೆತಿಲ್ಲ ಎಂದು ವಾಗ್ದಾಳಿ ನಡೆಸಿದ್ರು.
ಇದನ್ನು ಓದಿ : – ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಸಭೆ ಕರೆದ ಅಮಿತ್ ಶಾ – ನಾಳೆ ದೆಹಲಿಯಲ್ಲಿ ನಡೆಯಲಿದೆ ಮಹತ್ವದ ಸಭೆ