ದತ್ತಪೀಠದ ವಿವಾದಿತ ಸ್ಥಳದಲ್ಲಿ ಮಾಂಸದೂಟ, ಗೋರಿ ಪೂಜೆ ಬಳಿಕ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುವಂತೆ ಕಾಣುತ್ತಿರುವ ವೀಡಿಯೋವೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ದತ್ತಪೀಠದ ಆವರಣದಲ್ಲೇ ನಮಾಜ್ ಮಾಡುತ್ತಿದ್ದಾರೆ. ಆವರಣ ಮಾತ್ರವಲ್ಲ, ಗುಹೆಯ ಒಳಗೂ ನಮಾಜ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ :- ನಿರಂತರ ಮಳೆ ಹಿನ್ನೆಲೆ- ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ
ಕೋರ್ಟ್ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ, ಕೋರ್ಟ್ ಆದೇಶವನ್ನು ಗಾಳಿಗೆ ತೂರಿ ಪೂಜೆ ಸಲ್ಲಿಸಿದ್ದರು. ಕೋರ್ಟ್ ಆದೇಶದ ಅನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ.
ಇದನ್ನೂ ಓದಿ :- ಸಮುದ್ರದಲ್ಲಿ ಚೇಸಿಂಗ್ ಮಾಡಿದ ಅಧಿಕಾರಿಗಳು – 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ