ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ JDSನ ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟಿಸ್ ಜಾರಿ ಮಾಡಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸಗೌಡ (Srinivas Gowda) ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್ ಗೆ (Gubbi Srinivas) ನೋಟಿಸ್ ಜಾರಿ ಮಾಡಿದ್ದು, ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನ ಅನರ್ಹ ಮಾಡುವಂತೆ ವಿಧಾನಸಭೆ ಕಾರ್ಯದರ್ಶಿಗಳಿಗೆ ಜೆಡಿಎಸ್ (JDS) ಪಕ್ಷದಿಂದ ದೂರು ನೀಡಲಾಗಿತ್ತು. ಜೆಡಿಎಸ್ ದೂರು ಹಿನ್ನೆಲೆಯಲ್ಲಿ ವಿವರಣೆ ಕೇಳಿ ಮಾಡಿದ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರ ಅರೆ ನ್ಯಾಯಿಕ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ : – ನಾನು ಮತ್ತೆ ಕಾಂಗ್ರೆಸ್ ಗೆ ಹೋಗೋ ಮಾತೇ ಇಲ್ಲ – ಭೈರತಿ ಬಸವರಾಜ್
ರಾಜ್ಯಸಭಾ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಲೇಹರ್ ಸಿಂಗ್ ಪರ ಮತದಾನ ಮಾಡಿದ್ದಾರೆ ಎಂದು ಗುಬ್ಬಿ ಶ್ರೀನಿವಾಸ್ ವಿರುದ್ಧ ಆರೋಪಿಸಲಾಗಿತ್ತು. ಇನ್ನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಕೋಲಾರ ಶ್ರೀನಿವಾಸಗೌಡ ಹೇಳಿದ್ದರು.
ಇದನ್ನೂ ಓದಿ : – ದಸರಾ ವೇಳೆ ಬೆಂಗಳೂರಿಗರಿಗೆ ನಮ್ಮ ಮೆಟ್ರೋ ವತಿಯಿಂದ ಗುಡ್ ನ್ಯೂಸ್