ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ – ವಿಚಾರಣೆ ಮೇ 26ಕ್ಕೆ ಮುಂದೂಡಿದ ಜಿಲ್ಲಾ ಕೋರ್ಟ್

ವಾರಾಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕೋರ್ಟ್ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದೆ.

ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಚಿತ್ರೀಕರಣ ಆರಂಭ -  NAMMAKUDLA NEWS - ನಮ್ಮಕುಡ್ಲ ನ್ಯೂಸ್

ಇಂದು ಅರ್ಜಿಯ ವಾದ-ವಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದು ಮೇ 26ರವರೆಗೆ ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಆದೇಶಿಸಿದೆ. ಹಿಂದೂಗಳು ಸಲ್ಲಿಸಿರುವ ಅರ್ಜಿಯ ಸಿಂಧುತ್ವದ ಬಗ್ಗೆ ಮೇಲೆ 26ರಂದು ವಿಚಾರಣೆ ಆರಂಭಿಸಲಿದೆ. ಅಂದು ಅರ್ಜಿಯು ವಿಚಾರಣೆಗೆ ಯೋಗ್ಯವೇ ಅಲ್ಲವೆ ಎಂಬುವದನ್ನು ಪರಿಗಣಿಸಲಾಗುತ್ತದೆ. ಇದನ್ನೂ ಓದಿ :- ಸಾಮಾನ್ಯ ಕಾರ್ಯಕರ್ತರಿಗೆ ಹೈಕಮಾಂಡ್ ಟಿಕೆಟ್ ನೀಡಿರೋದು ಸಂತಸ ತಂದಿದೆ – ಸತೀಶ್ ಜಾರಕಿಹೊಳಿ

Gyanvapi masjid controversy: ಕೋರ್ಟ್ ನೇಮಿಸಿದ ಕಮೀಷನರುಗಳಿಂದ ವಿಡಿಯೋ ಸರ್ವೇ ನಾಳೆ  ಆರಂಭ, ಪ್ರಕ್ರಿಯೆ ಹೇಗೆ ನಡೆಯಲಿದೆ ಗೊತ್ತಾ? | Gyanvapi masjid court appointed  commissioner to conduct video survey from May 14 | TV9 Kannada

ಸುಪ್ರೀಂ ಕೋರ್ಟ್ ಸಹ ಅರ್ಜಿಯು ವಿಚಾರಣೆಗೆ ಸೂಕ್ತವೇ ಎಂಬುದನ್ನು ಮೊದಲು ಪರಿಗಣಿಸುವಂತೆ ಸೂಚಿಸಿತ್ತು. ಇಂದು ತೀರ್ಪು ನೀಡುವುದಾಗಿ ಘೋಷಿಸಿದ್ದ ಜಿಲ್ಲಾ ಕೋರ್ಟ್ ವಿಚಾರಣೆ ಮುಂದೂಡಿದೆ. ಇನ್ನು ಸರ್ವೇ ವರದಿಯನ್ನು ನೀಡುವಂತೆ ವಕೀಲರು ಕೇಳಿದ್ದರಿಂದ ಎರಡು ಕಡೆಯವರಿಗೆ ಸರ್ವೇ ವರದಿ ನೀಡಲು ಕೋರ್ಟ್ ಆದೇಶಿಸಿದ್ದು ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಿದೆ.

ಇದನ್ನೂ ಓದಿ :-  ವಿಜಯೇಂದ್ರ ಗೆ ಸಿಗದ ಪರಿಷತ್ ಟಿಕೆಟ್ – ಮಾಜಿ ಸಿಎಂ ಬಿಎಸ್ ವೈ ಗೆ ಶಾಕ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!