ಮೇ 14ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಅಲ್ಲಿ ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಗಳ ಬಗ್ಗೆ ಚರ್ಚೆ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿಯ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬಿಸಿ ಬಗ್ಗೆ ಕಾನೂನು ಸಚಿವರು ಹೇಳಿದ್ದಾರೆ. ಬಿಬಿಎಂಪಿ ಸಂಬಂಧಿಸಿದ ಕೇಸ್ ಒಂದು ಸುಪ್ರೀಂ ನಲ್ಲಿ ಪೆಂಡಿಂಗ್ ಇದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿಗೆ ಒಬಿಸಿ ಮೀಸಲಾತಿ ಬೇಕು. ಇದರ ಬಗ್ಗೆ ಕಾನೂನಾತ್ಮಕವಾಗಿ ಕೇಳಿದ್ದೇವೆ. ಇದನ್ನೂ ಓದಿ : – ಉದಯಪುರದಲ್ಲಿ ಇಂದಿನಿಂದ 3 ದಿನ ಕಾಂಗ್ರೆಸ್ ನವ ಸಂಕಲ್ಪ ಶಿಬಿರ
ಇವಾಗ ನಾವು ಏನು ಮಾಡಿದ್ದೇವೆ ಅದಕ್ಕೆ ಸ್ವಲ್ಪ ಸಮಯಾವಕಾಶ ಕೊಡಿ. ಇಲ್ಲ ಅಂದರೆ ಹಳೆ ಓಬಿಸಿ ಮೀಸಲಾತಿ ಏನು ಇದೆಯೋ ಅದಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದೇವೆ. ಬಹುತೇಕವಾಗಿ ನಮಗೆ ಅವಕಾಶ ಸಿಗುವ ವಿಶ್ವಾಸ ಇದೆ ಎಂದು ಬೊಮ್ಮಾಯಿ ತಿಳಿಸಿದ್ರು.
ಇದನ್ನೂ ಓದಿ : – ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ