ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವನ್ನು ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ( congress) ನಾಯಕ ರಾಹುಲ್ ಗಾಂಧಿ ( rahul gandhi ) ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿಗೆ ರಾಷ್ಟ್ರದಲ್ಲಿನ ಬೆಲೆ ಏರಿಕೆ ಅಥವಾ ನಿರುದ್ಯೋಗ ಪರಿಸ್ಥಿತಿ ಕಾಣಿಸುತ್ತಿಲ್ಲವೇ? ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಪ್ರಧಾನಿಯಾದವರು ಪ್ರಜೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ರಾಷ್ಟ್ರ ಬಯಸುತ್ತದೆ.
ಅವರೇ ನಿಮ್ಮ ಕರಾಳತನವನ್ನು ಮಚ್ಚಿಕೊಳ್ಳಲು ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆಯುವುದನ್ನು ನಿಲ್ಲಿಸಿ’ ಎಂದು ರಾಹುಲ್ ಆಗ್ರಹಿಸಿದ್ದಾರೆ. ಇದನ್ನೂ ಓದಿ : – ಯಾವುದೇ ಕಾರಣಕ್ಕೂ ಬೊಮ್ಮಾಯಿ ಬದಲಾವಣೆ ಇಲ್ಲ – ಸಿ.ಸಿ ಪಾಟೀಲ್
‘ಆಗಸ್ಟ್ 5 ರಂದು ಬ್ಲ್ಯಾಕ್ ಮ್ಯಾಜಿಕ್ ಮಾಡುವ ಪ್ರಯತ್ನವನ್ನು ನಾವು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರೆ ತಮ್ಮ ಹತಾಶೆ ಅವಧಿ ಮುಗಿಯಲಿದೆ ಎಂದು ಕಾಂಗ್ರೆಸ್ ನವರು ತಿಳಿದುಕೊಂಡಿದ್ದಾರೆ. ಆದರೆ ಅವರು ಎಷ್ಟೇ ಅಬ್ಬರಿಸಿದರೂ, ಎಷ್ಟೇ ಮ್ಯಾಜಿಕ್ ಮಾಡಿದ್ರೂ, ಸಾರ್ವಜನಿಕರ ವಿಶ್ವಾಸವನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಅವರು ಅರಿತಿಲ್ಲ ಎಂದರು. ಕಪ್ಪು ಬಟ್ಟೆ ಧರಿಸಿದರೆ ಅವರ ಕೆಟ್ಟ ದಿನಗಳು ಕೊನೆಯಾಗುತ್ತವೆ ಎಂದು ಭಾವಿಸಿಕೊಂಡಿದ್ದಾರೆ. ಆದರೆ, ಮಾಟ-ಮಂತ್ರ, ವಾಮಾಚಾರದಂತಹ ಕೃತ್ಯಗಳಿಗೆ, ಮೌಢ್ಯಗಳಿಗೆ ಮೊರೆ ಹೋಗುವುದರಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ’ ಎಂದಿದ್ದರು.
ಇದನ್ನೂ ಓದಿ : – ಸ್ವಾತಂತ್ರ್ಯಕ್ಕೂ ಮುಂಚೆ ಕಾಂಗ್ರೆಸ್ ಪಕ್ಷ ರಾಜಕೀಯ ಪಕ್ಷವೇ ಅಲ್ಲ: ಸಚಿವ ಡಾ.ಕೆ.ಸುಧಾಕರ್