ಬಿಜೆಪಿಯವರ ಬಗ್ಗೆ ಮಾತನಾಡಿ ಕಾಲಹರಣ ಮಾಡೋದು ಬೇಡ – ಡಿಕೆ ಶಿವಕುಮಾರ್

ಕಾಂಗ್ರೆಸ್ ( Congress)ಚಿಂತನಾ ಶಿಬಿರ ಒಂದು ಐತಿಹಾಸಿಕ ಸಭೆಯಾಗಿದ್ದು ಎಐಸಿಸಿ ಯಿಂದ ಕೆಲ ನಿರ್ದೇಶನ ನೀಡಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Dk .Shivkumar) ಹೇಳಿದ್ದಾರೆ .

ಕೆಲ ಅರ್ಹವಿರುವ ನಾಯಕರನ್ನು ಆಹ್ವಾನಿಸಲು ಸಾಧ್ಯವಾಗಲಿಲ್ಲ. ಈಗಾಗಲೇ ಸಕ್ರಿಯವಾಗಿರುವ ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸೇರಿದಂತೆ 100 ಕ್ಕೂ ಅಧಿಕ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ ಎಲ್ಲರಿಗೂ ಗೊತ್ತಿರುವ ಹಾಗೆ 6 ಸಮಿತಿಗಳನ್ನ ರಚನೆ ಮಾಡಲಾಗಿದೆ. 2023 ರ ಚುನಾವಣೆಗೆ ಮತ್ತು 2024 ರ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ಕಡ್ಡಾಯವಾಗಿ ಮಾಡಬೇಕು. ಎಐಸಿಸಿ ಪ್ರತಿ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ . ಇದನ್ನೂ ಓದಿ : – ದೇವನಹಳ್ಳಿ ರೆಸಾರ್ಟ್ ನಲ್ಲಿ ಇಂದು ಮತ್ತು ನಾಳೆ ಕಾಂಗ್ರೆಸ್ ‘ನವ ಸಂಕಲ್ಪ ಶಿಬಿರ’

ಆಗಸ್ಟ್ 8ರಿಂದ 15ರವರೆಗೆ ಪಾದಯಾತ್ರೆ ಮಾಡಲಾಗುತ್ತದೆ . ವಿಧ್ಯಾರ್ಥಿಗಳು, ಕಾರ್ಯಕರ್ತರು ಸೇರಿ ಈ ಕಾರ್ಯಕ್ರಮ ಮಾಡಲಾಗುವುದು. ತ್ರಿವರ್ಣ ಧ್ವಜ ಹಾರಿಸುವ ಮೂಲಕ ಪಾದಯಾತ್ರೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.ನಮಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯವಾಗಿದೆ. .ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಮಿತಿಯ ಸದಸ್ಯರು ಸಲಹೆ ನೀಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ ಬಿಜೆಪಿಯವರ (Bjp) ಬಗ್ಗೆ ಮಾತನಾಡಿ ಕಾಲಹರಣ ಮಾಡೋದು ಬೇಡ ಎಂದು ಪ್ರತಿಕ್ರಿಯಿಸಿದ್ರು. ಇದನ್ನೂ ಓದಿ : – ಮೋದಿ ನಾಯಕತ್ವದಲ್ಲಿ ಸಣ್ಣ ಸೈನಿಕನಂತೆ ಕೆಲಸ ಮಾಡುತ್ತೇನೆ – ಹಾರ್ದಿಕ್ ಪಟೇಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!