ಈಶ್ವರಪ್ಪ ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದಿದ್ದರು. ಬಿ.ಸಿ. ನಾಗೇಶ್ ಕೇಸರಿ ಧ್ವಜದ ಮುಂದೆ ರಾಷ್ಟ್ರಧ್ವಜವನ್ನು ಕುಗ್ಗಿಸಿದ್ದಾರೆ. ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದಿದ್ದೇ ಆದರೆ ವಿವೇಕವಿಲ್ಲದ ಶಿಕ್ಷಣ ಸಚಿವರನ್ನು ವಜಾಗೊಳಿಸಲಿ ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ( congrss) ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.
ರಾಜ್ಯದ ರೈತರನ್ನು ಮಳೆ ಮುಳುಗಿಸಿಲ್ಲ, ಬಿಜೆಪಿ( bjp )ಸರ್ಕಾರವೇ ಅನ್ಯಾಯವೆಸಗಿ ಮುಳುಗಿಸುತ್ತಿದೆ. ನೆರೆಯಿಂದ ಆದ ಬೆಳೆ ನಷ್ಟವನ್ನು ಇದುವರೆಗೂ ಸರ್ಕಾರ ಸರ್ವೆ ನಡೆಸಿಲ್ಲ, ಪರಿಹಾರವೂ ಘೋಷಿಸಿಲ್ಲ. ನೆರೆಯಿಂದ ಸಂತ್ರಸ್ತರಾದವರಿಗೆ ಕೈಗೊಂಡ ತುರ್ತು ಪರಿಹಾರ ಕ್ರಮಗಳೇನು ಎಂದು ಸರ್ಕಾರ ಹೇಳಲಿ ಎಂದು ಹೇಳಿದೆ. ಇದನ್ನೂ ಓದಿ : – ಇದು ಲಂಚ-ಮಂಚದ ಸರ್ಕಾರ – ಪ್ರಿಯಾಂಕ್ ಖರ್ಗೆ ವ್ಯಂಗ್ಯ
ರಾಜಕೀಯ ಹೇಳಿಕೆ ನೀಡಬೇಕೆಂದರೆ ಎಲ್ಲೆಲ್ಲೋ ಬಿಲದಲ್ಲಿ ಅಡಗಿದ ಸಚಿವರೆಲ್ಲರೂ ಎದ್ದು ಓಡೋಡಿ ಬರುತ್ತಾರೆ, ನೆರೆ ವಿಚಾರ ಬಂದರೆ ಬಿಲ ಸೇರುತ್ತಾರೆ! ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳ ನೆರೆ ಹಾನಿಯ ಬಗ್ಗೆ ಕೈಗೊಂಡ ಕ್ರಮಗಳ ಎಂದು ಕೇಳಿದರೆ ಮೌನಕ್ಕೆ ಜಾರುತ್ತಾರೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಖರಿ! ಎಂದು ವ್ಯಂಗ್ಯವಾಡಿದೆ.
ಇದನ್ನೂ ಓದಿ : – 2,500 ಅಡಿ ಉದ್ದದ ತಿರಂಗಾ ವಾಕಥಾನ್ ಗೆ ಸುಧಾಕರ್ ಚಾಲನೆ