ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷದ 40ಕ್ಕೂ ಹೆಚ್ಚು ಶಾಸಕರು ತಮ್ಮ ವಿರುದ್ಧ ಬಂಡಾಯವೆದ್ದಿದ್ದಾರೆ. ಇದೀಗ ಒಂದು ವಾರದ ನಂತರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚನೆ ವಿರುದ್ಧ ಶಿವಸೇನೆ (shiva sena ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ರಾಜ್ಯಪಾಲರು ನಾಳೆ ಬೆಳಗ್ಗೆ 11 ಗಂಟೆಗೆ ಮಹಾ ವಿಕಾಸ ಅಘಾಡಿ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತ ಪರೀಕ್ಷೆಗೆ ಕರೆದಿದ್ದಾರೆ. 16 ಮಂದಿ ಶಾಸಕರ ಅನರ್ಹತೆ ವಿಚಾರವು ಸುಪ್ರೀಂ ಕೋರ್ಟ್ (suprem court )ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಬಹುಮತ ಸಾಬೀತಿಗೆ ಕರೆದಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ. ಇದನ್ನೂ ಓದಿ : – ವಿಶ್ವಾಸಮತ ಯಾಚನೆಗೆ ಠಾಕ್ರೆಗೆ ರಾಜ್ಯಪಾಲ ಸೂಚನೆ – ನಾಳೆ ಮುಂಬೈಗೆ ಮರಳುವುದಾಗಿ ಏಕನಾಥ್ ಶಿಂಧೆ ಹೇಳಿಕೆ
ಶಾಸಕರ ಅನರ್ಹತೆ ಪ್ರಕರಣ ಇತ್ಯರ್ಥವಾಗುವವರೆಗೆ ಮತ್ತು ನೋಟಿಸ್ ಕಳುಹಿಸಿರುವ ಇತರ ವಿಷಯಗಳು ಇತ್ಯರ್ಥವಾಗುವವರೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪರೀಕ್ಷೆ ಹೇಗೆ ನಡೆಸಲು ಸಾಧ್ಯ ಎಂದು ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಬಹುಮತ ಸಾಬೀತು ನಡೆಸಿದರೆ ಇದು ನ್ಯಾಯಾಲಯದ ನಿಂದನೆ ಪ್ರಕ್ರಿಯೆಯಾಗಲಿದೆ. ಸಂಜೆಯೇ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನೂ ಓದಿ : – ಮುಂಬೈಗೆ ಬಂದು ನನ್ನೊಂದಿಗೆ ಮಾತನಾಡಿ – ಬಂಡಾಯ ಶಿವಸೇನಾ ಶಾಸಕರಿಗೆ ಉದ್ದವ್ ಠಾಕ್ರೆ ಭಾವನಾತ್ಮಕ ಮನವಿ