ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಸಿಕ್ಕಿದ್ದು ಸಂತೋಷದ ಸಂಗತಿ ಎಂದು ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇದೇ ರೀತಿ ಮುಂದಿನ ಚುನಾವಣೆ ಕಾರ್ಯಕರ್ತರಿಗೆ ಮಣೆ ಹಾಕಬೇಕು.
ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿಯ ನಿರ್ಣಯ ಕೈಗೊಳ್ಳಬೇಕು. ಎಂದು ತಿಳಿಸಿದ್ದಾರೆ. ಎಸ್ ಆರ್ ಪಾಟೀಲ್ ಗೆ ಟಿಕೆಟ್ ಕಡೆಗಣಿಸಲಾಗಿದೆ ಎಂಬ ಬಿಜೆಪಿ ಆರೋಪ ಕುರಿತಂತೆ ಪ್ರತಿಕ್ರಿಯಿಸಿ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ. ಇದನ್ನೂ ಓದಿ :- ವಿಜಯೇಂದ್ರ ಗೆ ಸಿಗದ ಪರಿಷತ್ ಟಿಕೆಟ್ – ಮಾಜಿ ಸಿಎಂ ಬಿಎಸ್ ವೈ ಗೆ ಶಾಕ್
ಯಡಿಯೂರಪ್ಪ ಮಹಾನ್ ನಾಯಕ ಅವರ ಮಗನಿಗೆ ಟಿಕೆಟ್ ನೀಡಿಲ್ಲ. ಎಲ್ಲಾ ಹಂತದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ. ಅದನ್ನು ಬಿಜೆಪಿ ಸರಿ ಮಾಡಬೇಕು, ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ :- ರಾಜಕೀಯ ವ್ಯವಹಾರಗಳ ಗುಂಪು, ಟಾಸ್ಕ್ ಫೋರ್ಸ್ ರಚಿಸಿದ ಸೋನಿಯಾ ಗಾಂಧಿ- ರೆಬಲ್ ಗಳಿಗೂ ಸ್ಥಾನ ನೀಡಿ ಭಿನ್ನಮತ ಶಮನಕ್ಕೆ ಯತ್ನ…!