ಹಿಜಾಬ್ ಇಡೀ ಜಗತ್ತಿನಲ್ಲೇ ಚರ್ಚೆ ಆಗುತ್ತಿದೆ – ಜಗದೀಶ್ ಶೆಟ್ಟರ್

ಇವತ್ತು ಹಿಜಾಬ್ (Hijab) ನ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme court) ಆದೇಶ ನೀಡಿದೆ. ಓರ್ವ ನ್ಯಾಯಾಧೀಶರು ಹೈಕೋರ್ಟ್ (High court) ಆದೇಶವನ್ನ ಎತ್ತಿ ಹಿಡಿದಿದ್ದು, ಮತ್ತೊಬ್ಬರು ವಜಾ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagdish shetter) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರಕರಣವನ್ನ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಇವತ್ತು ಹಿಜಾಬ್ (Hijab) ನ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme court) ಆದೇಶ ನೀಡಿದೆ. ಓರ್ವ ನ್ಯಾಯಾಧೀಶರು ಹೈಕೋರ್ಟ್ (High court) ಆದೇಶವನ್ನ ಎತ್ತಿ ಹಿಡಿದಿದ್ದು, ಮತ್ತೊಬ್ಬರು ವಜಾ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagdish shetter) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರಕರಣವನ್ನ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಇದರಿಂದ ಪ್ರಕರಣವನ್ನ ಯಥಾಸ್ಥಿತಿ ಕಾಪಾಡಿಕೊಂಡು ಹೋಗಬೇಕಾಗಿದೆ. ಈಗ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಿದೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಇದನ್ನ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಬೇಕಾಗಿದೆ. ಅಲ್ಲಿ ಆದಷ್ಟು ಬೇಗ ಒಂದು ನಿರ್ಧಾರಕ್ಕೆ ಬರುವುದು ಅವಶ್ಯಕತೆ ಇದೆ ಎಂದು ಹೇಳಿದ್ರು. ಹಿಜಾಬ್ ಇಡೀ ಜಗತ್ತಿನಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಕೆಲವು ದೇಶಗಳಲ್ಲಿ ಹಿಜಾಬ್ ಧರಿಸಲಿಕ್ಕೆ ವಿರೋಧ ಮಾಡುತ್ತಿದ್ದಾರೆ. ಇಲ್ಲಿ ಸಹ ಅದೇ ಪ್ರಾರಂಭವಾಯಿತು. ಹೀಗಾಗಿ ಇದಕ್ಕೆ ಅಂತಿಮ ತೀರ್ಪು ಆಗುವುದು ಅತಿ ಅವಶ್ಯಕತೆ ಇದೆ. ಆದ್ದರಿಂದಾಗಿ ಇದನ್ನ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಬೇಕಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಇದನ್ನೂ ಓದಿ :- ಪಾಕಿಸ್ತಾನವೇ ಮೋದಿಗೆ ಹೆದರಬೇಕಾದರೇ ಇನ್ನು ಸಿದ್ದರಾಮಯ್ಯ ಯಾವ ಲೆಕ್ಕ- ಈಶ್ವರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!