ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಮೈಸೂರು (Mysuru) ಕೇಂದ್ರ ಕಾರಾಗೃಹ (Jail) ಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಭೇಟಿ ನೀಡಿದರು. ಕಾರಾಗೃಹದ ಸಿಬ್ಬಂದಿ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಸರಕಾರದಿಂದ ಬಂಧಿ ಕೈದಿಗಳ ಪುನರ್ವಸತಿ, ಹೆಚ್ಚಿಸಿರುವ ಕೂಲಿದರ, ಹಾಗೂ ಕಾರಾಗೃಹ ಅಭಿವೃದ್ದಿ ಮಂಡಳಿ ಅಸ್ತಿತ್ವಕ್ಕೆ ತಂದಿರುವ ಬಗ್ಗೆ ಬಂಧಿಗಳ ಗಮನ ಸೆಳೆದರು.

ಮೈಸೂರು (Mysuru) ಕೇಂದ್ರ ಕಾರಾಗೃಹ (Jail) ಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಭೇಟಿ ನೀಡಿದರು. ಕಾರಾಗೃಹದ ಸಿಬ್ಬಂದಿ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಸರಕಾರದಿಂದ ಬಂಧಿ ಕೈದಿಗಳ ಪುನರ್ವಸತಿ, ಹೆಚ್ಚಿಸಿರುವ ಕೂಲಿದರ, ಹಾಗೂ ಕಾರಾಗೃಹ ಅಭಿವೃದ್ದಿ ಮಂಡಳಿ ಅಸ್ತಿತ್ವಕ್ಕೆ ತಂದಿರುವ ಬಗ್ಗೆ ಬಂಧಿಗಳ ಗಮನ ಸೆಳೆದರು.

ಕಾರಾಗೃಹವನ್ನು ಸುಧಾರಣೆ ಹಾಗೂ ಮನ ಪರಿವರ್ತನೆಯ ತಾಣವೆಂದು ಸ್ವೀಕರಿಸಿ ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತು ಕೊಳ್ಳಿ ಎಂದು ಆರಗ ಜ್ಞಾನೇಂದ್ರ ಎಲ್ಲರಿಗೂ ಶುಭ ಹಾರೈಸಿದರು. ಕಾರಾಗೃಹದಲ್ಲಿರುವ ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ದಿ ಕೇಂದ್ರ, ಹೊಲಿಗೆ ತರಬೇತಿ ಘಟಕಕ್ಕೂ ಭೇಟಿ ನೀಡಿದ ಸಚಿವರು ಸಜಾ ಬಂಧಿ ಕೈದಿಗಳ ಜೊತೆ ಸಂಭಾಷಿಸಿದರು. ಕಾರಾಗೃಹದ ಒಳಗಿರುವ ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು ಕೈದಿಗಳು ಸುಶ್ರಾವ್ಯವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು. ಸಜಾ ಬಂಧಿ ಕೈದಿಗಳಿಂದ ಸಚಿವರು ಮನವಿ ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಮಹಿಳಾ ಸಜಾಬಂಧಿಗಳನ್ನು ಸಹ ಸಚಿವರು ಭೇಟಿ ನೀಡಿ ಅವರ ಅಹವಾಲುಗಳನ್ನು ಸ್ವೀಕರಿಸಿದರು. ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಸೂಚಿಸಿದರು. ಇದನ್ನೂ ಓದಿ : – ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ನಿರ್ಬಂಧಿಸಿದ ಕೇಂದ್ರ

ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಆರಗ ಜ್ಞಾನೇಂದ್ರ ಜೈಲಿನ ಒಳಗಡೆ ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು. ಮೈಸೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಶ್ರೀಮತಿ ಕೆ. ಸಿ ದಿವ್ಯಶ್ರೀ ಸೇರಿದಂತೆ, ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

ಇದನ್ನೂ ಓದಿ : – ದನದ ಕೊಟ್ಟಿಗೆಗೆ ನುಗ್ಗಿ ಆಕಳು ಕರುವನ್ನು ತಿಂದು ಹಾಕಿದ ಚಿರತೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!