ಜಾತ್ಯತೀತ ತತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು- ಡಿ.ಕೆ. ಶಿವಕುಮಾರ್ ಮನವಿ

ರಾಜ್ಯಸಭೆ ಚುನಾವಣೆಗೆ (Rajyasabhaelection) ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ(Siddaramaiah) ನವರು ಹಾಗೂ ಪಕ್ಷದ ನಾಯಕರು ಚರ್ಚೆ ಮಾಡಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಸದಾಶಿವನಗರದಲ್ಲಿ ಡಿ.ಕೆ. ಶಿವಕುಮಾರ್ (DK.Shivkumar) ಹೇಳಿದ್ದಾರೆ.

33

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ (Congress) ಪಕ್ಷದಿಂದ ಮಂಡ್ಯ ಮೂಲದ, ಅಲ್ಪಸಂಖ್ಯಾತ ಸಮುದಾಯದ, ಸಾಚಾರ್ ವರದಿಗೆ ಕಾರಣಕರ್ತರಾದ ನಮ್ಮ ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್ ಅವರ ಪುತ್ರ, ವಿದ್ಯಾವಂತ ಯುವಕ ಮನ್ಸೂರ್ ಅಲಿ ಖಾನ್ (Mansoor alikhan) ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ. ಜಾತ್ಯಾತೀತ ತತ್ವ ಉಳಿಸಲು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜೆಡಿಎಸ್ ಗೆ ನಾನು ಮತ್ತು ಸಿದ್ದರಾಮಯ್ಯನವರು ಮನವಿ ಮಾಡಿದ್ದೇವೆ. ಈ ಹಿಂದೆ ಜೆಡಿಎಸ್ (JDS) ಪಕ್ಷಕ್ಕೆ ನಾವು ಸಾಕಷ್ಟು ಬಾರಿ ಸಹಾಯ ಮಾಡಿದ್ದು, ಈ ಬಾರಿ ಅವರು ನಮಗೆ ಬೆಂಬಲ ನೀಡಬೇಕು. ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿರುವ ವಿಚಾರವಾಗಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅದು ಅವರ ಪಕ್ಷದ ವಿಚಾರ. ನಮ್ಮ ಪಕ್ಷದ ಹಲವು ನಾಯಕರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಯಾರು ಯಾರ ಮನೆಗೆ ಹೋಗಿದ್ದಾರೆ. ಯಾರಿಗೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇದು ತಪ್ಪು ಎಂದು ನಾನು ಹೇಳುವುದಿಲ್ಲ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ : – ಜೆಡಿಎಸ್‌ ಕಾಂಗ್ರೆಸ್ ಏನೇ ಪ್ರಯತ್ನ ಮಾಡಿದರೂ ಗೆಲುವು ಕಷ್ಟ – ಯಡಿಯೂರಪ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!