ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆ..! ವಲಸೆ ಬಂದ ನಾಯಕರು

ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿ (Bengaluru) ನ ಚಾಮರಾಜಪೇಟೆ (Chamrajpete) ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (HD.Devegowda) , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (Kumarswamy) , ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಲ್ಲ ನಾಯಕರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಳ್ಳಲಾಯಿತು. ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ರಾಜು, ಮಾಜಿ ಉಪ ಮೇಯರ್ ಶ್ರೀರಾಮೇಗೌಡ, ಪಾಲಿಕೆಯ ಮಾಜಿ ಸದಸ್ಯರಾದ ಗೌರಮ್ಮ, ಕಾಂಗ್ರೆಸ್ ಪಕ್ಷದ ನಾಯಕರಾದ ಶೇಖರ್, ದೊರೆ ಸೇರಿ 53ಕ್ಕು ಹೆಚ್ಚು ವಿವಿಧ ಪಕ್ಷಗಳ ಮುಖಂಡರು ಪಕ್ಷವನ್ನು ಸೇರಿದರು. ಇದನ್ನು ಓದಿ : –  ಹಿರಿಯ ನಟ ಶರತ್ ಕುಮಾರ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿಗಳ ಕಿವಿಮಾತು

ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ (Pancharatha yatre) ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಿವಿಮಾತು ಹೇಳಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು ನಡೆಯುತ್ತಿವೆ. ನಾವು ನಮ್ಮ ಪಾಡಿಗೆ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಇದನ್ನು ಓದಿ : –  ಹಿರಿಯ ನಟ ಶರತ್ ಕುಮಾರ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!