ನಾಳೆ 67ನೇ ಕನ್ನಡ ರಾಜ್ಯೋತ್ಸವ (Kannada rajyotsava) ವನ್ನು ಆಚರಿಸುತ್ತಿದ್ದೇವೆ. ನಾಳೆ ಮಧ್ಯಾಹ್ನ 4 ಗಂಟೆಗೆ ಕರ್ನಾಟಕ ರತ್ನ (Karnataka rathna) ಪ್ರಶಸ್ತಿಯನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪುನೀತ್ (Puneeth rajkumar) ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ (Basavaraj bommai) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲಾ ಅಭಿಮಾನಿಗಳು ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ.
ವಿವಿಧ ಕ್ಷೇತ್ರಗಳ ಸಾಧಕರಿಗೆ ನಾಳೆ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದೇವೆ. ನವೆಂಬರ್ 2,3,4 ರಂದು ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮಾಡ್ತಿದ್ದೇವೆ. ವಿಶ್ವದ ನಾನಾ ಭಾಗದ ಹೂಡಿಕೆದಾರರು, ಬಂಡವಾಳಶಾಹಿಗಳು ಭಾಗಿಯಾಗ್ತಾರೆ ಎಂದು ಹೇಳಿದ್ರು. 5 ಲಕ್ಷ ಕೋಟಿ ಹೂಡಿಕೆಯಾಗಲಿದೆ. ಅನೇಕ ಕ್ಷೇತ್ರಗಳ ಪ್ರಗತಿ, ಬೆಳವಣಿಗೆ ಸವಾಲುಗಳ ಬಗ್ಗೆ ಕೂಡ ಚರ್ಚೆ ನಡೆಸಲಾಗುವುದು. ಈ ಕಾರ್ಯಕ್ರಮ ಮುಂದಿನ ಕರ್ನಾಟಕದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿಯಾಗಿರಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಕೋರುತ್ತೇನೆ ಎಂದು ಹೇಳಿದರು. ಇದೇ ವೇಳೆ ನವೆಂಬರ್ 11 ರಂದು ವಂದೇ ಭಾರತ್ ಟ್ರೈನ್, ವಿಮಾನ ನಿಲ್ದಾಣದ ಟರ್ಮಿನಲ್ 2 ಮತ್ತು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಉದ್ಘಾಟನೆಯಾಗಲಿದೆ. ಆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಲಿದ್ದಾರೆ.
ಎಂಟಿಬಿ ನಾಗರಾಜ್ ವಿಡಿಯೋ ವಿಚಾರ
ಈಗಾಗಲೇ ಡಿಜಿಪಿಯವರಿಗೆ ಸೂಚನೆ ನೀಡಿದ್ದೇನೆ. ನಮಗೆ ಶೀಘ್ರವೇ ತನಿಖೆಯಿಂದ ಸತ್ಯ ಹೊರಗೆ ಬರಬೇಕು. ಅದಕ್ಕಾಗಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ತನಿಖೆಗೆ ಸೂಚಿಸಲಾಗಿದೆ ಎಂದು ಹೇಳಿದ್ರು. ಹಿಂದೆ ಜ್ಯುಡಿಷಿಯಲ್ ತನಿಖೆ ಬಗ್ಗೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ರೀಡೂ ತನಿಖೆ ಎಲ್ಲ ಏನಾಗಿದೆ ಎಂದು ಗೊತ್ತಿದೆ. ಅದಕ್ಕಾಗಿ ಬೇಗ ಸತ್ಯ ಹೊರಗೆ ಬರಲಿ. ಆ ಕಾರಣಕ್ಕಾಗಿ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗ್ತಿದೆ. ಸಾವು, ಪೋಸ್ಟಿಂಗ್ ಕುರಿತಂತೆ ತನಿಖೆ ಆಗಿ ಸತ್ಯ ಏನೆಂದು ಹೊರಗೆ ಬರಲಿದೆ ಎಂದು ನ್ಯಾಯಾಂಗ ತನಿಖೆಗೆ ಆಗ್ರಹ ಮಾಡಿದ್ದ ಕಾಂಗ್ರೆಸ್ ಗೆ ತಿರುಗೇಟು ಕೊಟ್ಟೆದ್ದಾರೆ. ಇದನ್ನೂ ಓದಿ : – ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ ಗೆ ಹಾರಿ ಮಹಿಳೆ ಆತ್ಮಹತ್ಯೆ…!
ಸಿದ್ದರಾಮಯ್ಯ ವಿರುದ್ಧ ಎನ್ ಆರ್ ರಮೇಶ್ ಆರೋಪ ವಿಚಾರ
ಪತ್ರಿಕೆಗಳಲ್ಲಿ ನೋಡಿದ್ದೇನೆ, ನನಗೂ ಮಾಹಿತಿ ಇದೆ. ಲೋಕಾಯುಕ್ತಕ್ಕೆ ದೂರು ನೀಡ್ತೇನೆ ಎಂದು ರಮೇಶ್ ಹೇಳಿದ್ದಾರೆ. ಇದರ ಬಗ್ಗೆ ತನಿಖೆ ಆಗಲಿ, ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ. ಸಿದ್ದರಾಮಯ್ಯ ನೀಡುವಂತೆ ಹೇಳಿಕೆ ನೀಡೊದಕ್ಕೆ ಆಗೋದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : – ಇಂದು ಇಂದಿರಾ ಗಾಂಧಿ ಪುಣ್ಯತಿಥಿ – ಪ್ರಧಾನಿ ಮೋದಿ, ಸೋನಿಯಾ, ರಾಹುಲ್ ಗಾಂಧಿ ಗೌರವ ನಮನ