ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲು ನಾಳೆ ಮಮತಾ ಬ್ಯಾನರ್ಜಿ ಸಭೆ – ಕಾಂಗ್ರೆಸ್ , ಎನ್ ಸಿ ಪಿ ಭಾಗಿ

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ತಂತ್ರಗಾರಿಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಳೆ ದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಕರೆದಿರುವ ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಕಾಂಗ್ರೆಸ್ ಪ್ರತಿನಿಧಿಸಲಿದ್ದಾರೆ.


ಶರದ್ ಪವಾರ್ ಕೂಡ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಅವರು ನಿರೀಕ್ಷಿತ ಅಭ್ಯರ್ಥಿಗಳಲ್ಲಿ ಎನ್ನಲಾಗಿತ್ತು. ಆದರೆ ಪವಾರ್ ರಾಷ್ಟ್ರಪತಿ ಚುನಾವಣೆಯ ರೇಸ್ ನಲ್ಲಿ ಇಲ್ಲ ಎಂದು ಎನ್ ಸಿಪಿ ಹೇಳಿದೆ. ಇದನ್ನೂ ಓದಿ : – ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆ ಭರ್ತಿಗೆ ಪ್ರಧಾನಿ ಮೋದಿ ಸೂಚನೆ

ಸಿಎಂ ಮಮತಾ ಬ್ಯಾನರ್ಜಿ ಶನಿವಾರ ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ. ಭಾರತದ ಮುಂದಿನ ರಾಷ್ಟ್ರಪತಿಗಾಗಿ ಜುಲೈ 18 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ : – ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!