ಮಹಾರಾಷ್ಟ್ರ ( MAHARASTRA ) ದಲ್ಲಿ ಮರಾಠಿ ಭಾಷಿಕ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕರ್ನಾಟಕ ಬಸ್ ಗೆ ಕಪ್ಪು ಮಸಿ ಬಳಿದು ಕೆಲವು ಮರಾಠಿ ಭಾಷಿಕರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ KSRTC ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಮಸಿ ಬಳಿದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಕರುನಾಡಿನ ಬಸ್ಸಿನ ಮೇಲೆ ಜೈ ಮಹಾರಾಷ್ಟ್ರ ಎಂದು ಬರವಣಿಗೆ ಬರೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ : – ನನಗೆ ಏನು ಗೊತ್ತು ನಿಮ್ಮತ್ರನೇ ಉತ್ತರ ಇದೆ ನಿಮ್ಮತ್ರನೇ ಪ್ರಶ್ನೆ ಇದೆ – ಡಿ.ಕೆ ಶಿವಕುಮಾರ್
ಮಹಾರಾಷ್ಟ್ರ ನಮ್ಮ ಹಕ್ಕು ಯಾರಪ್ಪನದಲ್ಲ
ನಿಪ್ಪಾಣಿ – ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಗೆ ಮಸಿ ಬಳಿದು ಪುಂಡಾಟ ಮೆರೆದಿರುವ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು. ಮಹಾರಾಷ್ಟ್ರ ನಮ್ಮ ಹಕ್ಕು ಯಾರಪ್ಪನದಲ್ಲ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ.
ಇದನ್ನೂ ಓದಿ : – ಹಾಲು, ಮೊಸರು ಆಯ್ತು ಈಗ ತುಪ್ಪದ ಬಿಸಿ..!