ಹಳೆ ಮೈಸೂರು (Mysuru) ಭಾಗದಲ್ಲಿ ಬಿಜೆಪಿ (BJP) ಪಕ್ಷ ಸಂಘಟನೆಗೆ ಮುಂದಾಗಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಸಚಿವ ನಾರಾಯಣಗೌಡರು ಹಲವರು ನಮ್ಮ ಸಂಪರ್ಕದಲ್ಲಿದ್ದು, ಕೆಲವೇ ದಿನಗಳಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿರುವ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಇದೀಗ ಈ ಮಾತುಗಳಿಗೆ ಸಾಕ್ಷಿ ಎಂಬಂತೆ ಸಂಸದೆ ಸುಮಲತಾ ಅಂಬರೀಶ್ (Sumalatha ambareesh) ಆಪ್ತ ಸಚ್ಚಿದಾನಂದ ಮತ್ತು ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಕಮಲ ಬಾವುಟ ಹಿಡಿಯುವ ಮೂಲಕ ಬಿಜೆಪಿ ಮನೆ ಪ್ರವೇಶಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚ್ಚಿದಾನಂದ ಅವರು, ಸಚಿವ ಅಶ್ವಥ್ ನಾರಾಯಣ್ (Ashwath narayan) , ಸಚಿವರಾದ ನಾರಾಯಣಗೌಡ, ಗೋಪಾಲಯ್ಯ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಇದೇ ವೇಳೆ ಮಂಡ್ಯ ಜಿಲ್ಲೆಯ ಹಲವು ನಾಯಕರು ಸಹ ಬಿಜೆಪಿ ಬಾವುಟ ಹಿಡಿದರು.
ಇದನ್ನೂ ಓದಿ : – TOLLYWOOD – ರಾಮ್ ಚರಣ್ ನಟನೆಯ ಹೊಸ ಪ್ಯಾನ್ ಇಂಡಿಯಾ ಚಿತ್ರ ಘೋಷಣೆ