ಅಂಬೇಡ್ಕರ್ 131ನೇ ಜಯಂತಿ ಹಿನ್ನೆಲೆ ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದ್ದಾರೆ.
ನಂತರ ಬಹುಮಹಡಿ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ ತೆರಳಿದ್ದಾರೆ. ಸಿಎಂಗೆ ಸಚಿವರಾದ ಅಶ್ವತ್ಥ್ ನಾರಾಯಣ, ಮುನಿರತ್ನ, ನಿರಾಣಿ, ಸಂಸದ ಸದಾನಂದಗೌಡ ಸೇರಿದಂತೆ ಪ್ರಮುಖ ಗಣ್ಯರು ಸಾಥ್ ನೀಡಿದ್ದಾರೆ.
ಸುಮಾರು 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಹುಮಹಡಿ ಕಟ್ಟಡವು 60 ಮನೆಗಳನ್ನು ಒಳಗೊಂಡಿದೆ. ಇದೇ ವೇಳೆ ಸಿಎಂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೂ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಇದನ್ನು ಓದಿ :- ಈ ಭ್ರಷ್ಟ ಸರ್ಕಾರವನ್ನು ಕಿತ್ತು ಒಗೆಯಬೇಕು, ಜನರಿಗೆ ಸರ್ಕಾರದ ಬಗ್ಗೆ ತಿಳಿಸಬೇಕಿದೆ – ಡಿ.ಕೆ.ಶಿ
ಲೋಕಾರ್ಪಣೆಗೂ ಮುನ್ನ ಮಾತನಾಡಿದ ಅವರು ಸಚಿವ ಈಶ್ವರಪ್ಪ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶವಾಗಲಿ, ತೀರ್ಮಾನವಾಗಲಿ ಏನೂ ಇಲ್ಲ. ಸಂತೋಷ್ ಪಾಟೀಲ್ ಪಾರ್ಥೀವ ಶರೀರ ಪೋಸ್ಟ್ ಮಾರ್ಟಮ್ ಆಗಿದ್ದು, ತನಿಖೆ ಈಗ ಆರಂಭವಾಗಿದೆ.
ಪ್ರಾಥಮಿಕ ಹಂತದ ತನಿಖೆ ಮುಗಿದ ನಂತರ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೂ ಯಾವುದೇ ಕ್ರಮ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ :- ಸಂತೋಷ್ ಸ್ನೇಹಿತ ಸಹ ಕಮಿಷನ್ ಬಗ್ಗೆ ಹೇಳಿದ್ದಾರೆ – ಸಿದ್ದರಾಮಯ್ಯ