ರಾಜ್ಯಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಾರ್ಯಕರ್ತರ ಮೇಲೆ ಪೊಲೀಸ್ ದಾಳಿ ನಡೆದಿದೆ. ಒಟ್ಟು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು ಇವರ ವಿರುದ್ಧ ಪ್ರಥಮ ವರ್ತಮಾನ ವರದಿ(FIR) ಬದಲು ಮುಂಜಾಗ್ರತಾ ಕ್ರಮದ ವರದಿ(Preventive Action Report) ಹಾಕಲಾಗಿದೆ.
ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (CrPC) ಕಲಂ 107, 108, 109 ಮತ್ತು 151ರ ಅಡಿ ಬರುವ ಅಡಿ ಭದ್ರತಾ ಕೇಸ್ ಗಳ ಹಾಗೂ ಮುಂಜಾಗೃತ ಕೇಸ್ ಗಳ ಮೇಲೆ ಪಿಎಆರ್ ದಾಖಲಿಸಲಾಗುತ್ತದೆ. ಪಿಎಆರ್ ದಾಖಲಾದ ಬಳಿಕ ವಶಕ್ಕೆ ಪಡೆದ ವ್ಯಕ್ತಿಯ ಯಾವ ಕೃತ್ಯದಿಂದ ಶಾಂತಿಗೆ ಭಂಗವಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಹೇಳಿಕೆ ಪಡೆಯಬೇಕಾಗುತ್ತದೆ. ಇದನ್ನೂ ಓದಿ : – ಸಂವಿಧಾನ ವಿರುದ್ಧವಾಗಿ ಆಪರೇಷನ್ ಕಮಲ ಮಾಡಿ ಅಸಂವಿಧಾನಿಕ ಸರ್ಕಾರ ರಚಿಸಿದ್ದು -ಇದು Bjp DirtyPolitics ಅಲ್ವೇ..?
ವಶಕ್ಕೆ ಪಡೆದ ವ್ಯಕ್ತಿಗಳ ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಲಾಗುತ್ತದೆ. ಆ ಮಾಹಿತಿ ಆಧರಿಸಿ ದಂಡಾಧಿಕಾರಿಗಳು, ಆತನಿಂದ ಮುಚ್ಚಳಿಕೆ ಪಡೆಯುತ್ತಾರೆ. ಇವರನ್ನ ನ್ಯಾಯಾಧೀಶರ ಬದಲು ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗುತ್ತದೆ. ವಶಕ್ಕೆ ಪಡೆದಿರುವ ವ್ಯಕ್ತಿಗಳನ್ನು ಆಯಾ ವ್ಯಾಪ್ತಿಯ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಗುತ್ತದೆ. ಸೂಕ್ತ ರೀತಿಯಲ್ಲಿ ಬಾಂಡ್ ಶ್ಯೂರಿಟಿ ಕೊಟ್ಟರಷ್ಟೇ ಬಿಡುಗಡೆ ಮಾಡಲಾಗುತ್ತದೆ. ಶ್ಯೂರಿಟಿ ನೀಡದೇ ಇದ್ದರೆ ಜೈಲಿಗೆ ಕಳುಹಿಸಲಾಗುತ್ತದೆ.
ಇದನ್ನೂ ಓದಿ : – HAL ನಲ್ಲಿ ಕ್ರಯೋಜೆನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು