ಜನಾರ್ದನ್ ರೆಡ್ಡಿ ( JANARDHAN REDDY ) ಹೊಸ ಪಕ್ಷ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ( BELGAVI ) ಯ ಸುವರ್ಣಸೌಧದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ( SRI RAMULU ) ಪ್ರತಿಕ್ರಿಯೆ ನೀಡಿದ್ದಾರೆ. ಜನಾರ್ದನ್ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.
ರೆಡ್ಡಿ ಬುದ್ದಿವಂತರು. ರಾಜಕೀಯದಲ್ಲಿ ಅನುಭವಸ್ಥರಿದ್ದಾರೆ. ನಾನು ಅವರ ಪ್ರಾಣ ಸ್ನೇಹಿತನಾಗಿ ಅವರಿಗೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ. ನಾನು ಇದರ ಬಗ್ಗೆ ಪಕ್ಷದ ಹಿರಿಯ ನಾಯಕರು ಹಾಗೂ ಸಿಎಂ ಜೊತೆ ಮಾತನಾಡಿದ್ದೆ. ಮತ್ತೆ ಅವಕಾಶ ಸಿಕ್ರೆ ಮಾತನಾಡುತ್ತೇನೆ ಎಂದು ಹೇಳಿದ್ರು. ಇದನ್ನು ಓದಿ : – ಜನಾರ್ದನ್ ರೆಡ್ಡಿ ಪಕ್ಷದಿಂದ ನಮಗೇನೂ ಹಾನಿಯಿಲ್ಲ – ಸಿಎಂ ಇಬ್ರಾಹಿಂ
ನಾನು ಬೊಮ್ಮಾಯಿ ( BASAVARAJ BOMMAI ) ಮಂತ್ರಿ ಮಂಡಲದಲ್ಲಿ ಸಚಿವನಾಗಿದ್ದೇನೆ. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ಆಗಬೇಕು. 2023 ಕ್ಕೆ ಮತ್ತೆ ಬಿಜೆಪಿ ಪಕ್ಷ ಆಡಳಿತಕ್ಕೆ ಬರಬೇಕು ಎಂದು ತಿಳಿಸಿದ್ದಾರೆ. ನಮ್ಮದು ರಾಷ್ಟ್ರೀಯ ರಾಜಕೀಯ ಪಕ್ಷ. ನಾನು ಡಿಬೇಟ್ ಮಾಡಲ್ಲ. ಒಳ್ಳೆಯದು ಕೆಟ್ಟದ್ದರ ಬಗ್ಗೆ ನಾನು ಮಾತನಾಡಲ್ಲ. ಸಿದ್ದಾಂತ ಮೇಲೆ ರಾಜಕೀಯ ಮಾಡುತ್ತೇವೆ ಎಂದು ತಿಳಿಸಿದ್ರು .
ಇದನ್ನು ಓದಿ : – ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆಯಲ್ಲಿ ನಟ ಕಮಲ್ ಹಾಸನ್ ಭಾಗಿ