ಇಂದು ದೇಶಾದ್ಯಂತ ವಿಜಯದಶಮಿ ( vijaya dashami ) ಯ ಸಂಭ್ರಮ. ಹೀಗಾಗಿ ಪ್ರತಿ ವರ್ಷದ ಪರಂಪರೆಯಂತೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ( rajnath singh ) ಉತ್ತರಾಖಂಡದ ಚಮೋಲಿಯಲ್ಲಿರುವ ಔಲಿ ಸೇನಾ ನಿಲ್ದಾಣದಲ್ಲಿ ಶಸ್ತ್ರ ಪೂಜೆ ನೆರವೇರಿಸಿದ್ದಾರೆ.
ಈ ವೇಳೆ ಉತ್ತರಾಖಂಡದ ಚಮೋಲಿಯಲ್ಲಿರುವ ಔಲಿ ಸೇನಾ ನಿಲ್ದಾಣದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಯೋಧರೊಂದಿಗೆ ಸಂವಾದ ನಡೆಸಿದ್ದಾರೆ. ಇದನ್ನೂ ಇದಿ : – ಮೈಸೂರಿನ ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
ಈ ವೇಳೆ ಮಾತನಾಡಿದ ಸಚಿವ ರಾಜನಾಥ್ ಸಿಂಗ್, ಆಯುಧಗಳ ಅಥವಾ ಶಸ್ತ್ರಾಸ್ತ್ರಗಳ ಪೂಜೆ ಮಾಡುವ ಏಕೈಕ ದೇಶ ಭಾರತ. ನಮ್ಮ ದೇಶವು ನಮ್ಮ ಸಶಸ್ತ್ರ ಪಡೆಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದು ನಮಗೆ ವಿಶ್ವಾಸವಿದೆ.
ನಮ್ಮ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳ ಯೋಧರು ನಮ್ಮ ದೇಶದ ಹೆಮ್ಮೆ ಎಂದು ಹೇಳಿದ್ರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶಸ್ತ್ರ ಪೂಜೆ ವೇಳೆ ಉಪಸ್ಥಿತರಿದ್ದರು.
ಇದನ್ನೂ ಇದಿ : – ಚಾಮುಂಡಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ