ಹುಬ್ಬಳ್ಳಿ (Hubballi) ಯಲ್ಲಿ 26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi murmu) ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜಗದೀಶ್ ಶೆಟ್ಟರ್ (Jagadeesh shetter) ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ರಾಷ್ಟ್ರಪತಿಗಳ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಸಲಾಗಿದೆ. ಹುಬ್ಬಳ್ಳಿ ಧಾರವಾಡಕ್ಕೆ ರಾಷ್ಟ್ರಪತಿಗಳು ಭೇಟಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಪೋಸ್ಟರ್ ವಾರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಗೌರವಯುತ ಪಕ್ಷವಾಗಿ ಉಳಿದಿಲ್ಲ . ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪೇ ಸಿಎಂ ಎನ್ನುವಂಥ ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು. ಕಾಂಗ್ರೆಸ್ ಯಾಕೆ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದೆ ಗೊತ್ತಿಲ್ಲ. ಭ್ರಷ್ಟಾಚಾರದ ಕುರಿತು ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ಸಲ್ಲಿಸಿ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕೆಳಮಟ್ಟಕ್ಕೆ ಇಳಿದಿದೆ. ಅವರದ್ದೇ ಪಕ್ಷದ ಓರ್ವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಪಕ್ಷದ ಭ್ರಷ್ಟಾಚಾರದ ಕುರಿತು ಬಹಿರಂಗವಾಗಿ ಹೇಳಿದ್ದಾರೆ. ತಮ್ಮ ಪಕ್ಷದವರೇ ಎರಡು, ಮೂರು ತಲೆಮಾರು ಆಗುವಷ್ಟು ಆಸ್ತಿ ಮಾಡಿದ್ದಾರೆ, ಅವರ ಪರ ಹೋರಾಡಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ ಇದನ್ನ ಅರಿತುಕೊಳ್ಳಲಿ ಎಂದು ತಿಳಿಸಿದರು. ಇದನ್ನು ಓದಿ :- ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಕಾರಜೋಳ ವಾಗ್ದಾಳಿ
ಇದೇ ವೇಳೆ ಭಾರತ ಜೋಡೋ ಬಿಟ್ಟು, ಕಾಂಗ್ರೆಸ್ ಜೋಡೊ ಮಾಡಲಿ. ಪಕ್ಷವನ್ನ ಉಳಿಸಿಕೊಳ್ಳೋ ಪ್ರಯತ್ನವನ್ನ ಕಾಂಗ್ರೆಸ್ ಮಾಡಲಿ. ಅದನ್ನು ಬಿಟ್ಟು ಈ ರೀತಿ ಕೀಳುಮಟ್ಟದ ರಾಜಕೀಯ ಮಾಡಬಾರದು ಎಂದು ಹೇಳಿದ್ರು. ರಾಹುಲ್ ಗಾಂಧಿ ಗೆ ರಾಷ್ಟ್ರೀಯ ಅಧ್ಯಕ್ಷ ಆಗಲು ಮನಸ್ಸಿಲ್ಲ. ಇನ್ನೂ ಪಕ್ಷ ಸಂಘಟನೆ ಹೇಗೆ ಮಾಡುತ್ತಾರೆ ಎಂದು ವ್ಯಂಗ್ಯ ವಾಡಿದ್ರು. ಇದೇ ವೇಳೆ ಬಸವರಾಜ ಹೊರಟ್ಟಿಗೆ ಯಾವ ಸ್ಥಾನ ಮಾನ ಕೊಡಬೇಕು ಅನ್ನೋದು ಪಕ್ಷಕ್ಕೆ ಬಿಟ್ಟ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇದನ್ನು ಓದಿ :- 18 ತಿಂಗಳುಗಳ ಕಾಲ ಕೋಮಾದಲ್ಲಿದ್ದಾನೆಂದು ಮನೆಯಲ್ಲೇ ಶವ ಇಟ್ಟುಕೊಂಡಿದ್ದ ಕುಟುಂಬ