ಭಾರತ್ ಜೋಡೋ ಯಾತ್ರೆ (Bharath jodo yatre) ದಿಲ್ಲಿಗೆ ಪ್ರವೇಶಿಸಿದ ಬಳಿಕ ರಾಹುಲ್ ಗಾಂಧಿ (RAHUL GANDHI) ಹಲವು ಬಾರಿ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿರುವುದಾಗಿ ಕೇಂದ್ರದ ಅರೆಸೇನಾ ಪಡೆ ಸಿಆರ್ಪಿಎಫ್ ಹೇಳಿದೆ. ಡಿಸೆಂಬರ್ 24ರ ಯಾತ್ರೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿರುವುದಾಗಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸಿಆರ್ಪಿಎಫ್ ಪ್ರತಿಕ್ರಿಯಿಸಿದೆ.
ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯವಾಗಿರುವ ಆರೋಪವನ್ನು ಭದ್ರತಾ ಪಡೆ ನಿರಾಕರಿಸಿದೆ.
ರಾಹುಲ್ ಗಾಂಧಿ 2020ರಿಂದ 113 ಬಾರಿ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿರುವುದಾಗಿ ಸಿಆರ್ಪಿಎಫ್ ಹೇಳಿದೆ. ‘ಭಾರತ್ ಜೋಡೋ ಯಾತ್ರೆಯು ದೆಹಲಿ (Delhi) ಯಲ್ಲಿ ಸಾಗುವ ವೇಳೆಯೂ ರಕ್ಷಣೆಗೆ ಒಳಪಟ್ಟಿದ್ದ ವ್ಯಕ್ತಿಯು ಭದ್ರತಾ ನಿಯಮಾವಳಿಗಳನ್ನು ಮೀರಿದ್ದಾರೆ. ಈ ವಿಚಾರವನ್ನು ಸಿಆರ್ಪಿಎಫ್ ಪ್ರತ್ಯೇಕವಾಗಿ ಗಮನಿಸಲಿದೆ’ ಎಂದು ತಿಳಿಸಿದೆ.
ದಿಲ್ಲಿ ಪೊಲೀಸರು ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರಿಗೆ ಪತ್ರ ಬರೆದಿದ್ದರು. ರಾಹುಲ್ ಗಾಂಧಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದ್ದು, ಭಾರತ್ ಜೋಡೋ ಯಾತ್ರೆಯು ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಿಸಿದಾಗ ಅಗತ್ಯ ಭದ್ರತೆ ಖಚಿತಪಡಿಸುವಂತೆ ಕಾಂಗ್ರೆಸ್ ಕೋರಿದೆ.
ಇದನ್ನು ಓದಿ : – ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ