ರಾಜ್ಯಸಭೆ ಚುನಾವಣೆ- ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಕಿದ ಸವಾಲು ಏನು ಗೊತ್ತಾ..?

ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಸವಾಲು ಹಾಕಿದ್ದಾರೆ. ಜೆಡಿಎಸ್ 32 2ನೇ ಪ್ರಾಶಸ್ತ್ಯ ಮತ ಕೊಡಲು ರೆಡಿ; ಕಾಂಗ್ರೆಸ್ 2ನೇ ಅಭ್ಯರ್ಥಿಯ 24 ಪ್ರಾಶಸ್ತ್ಯ ಮತ ನಮಗೆ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಇದೇ ವೇಳೆ ಯಡಿಯೂರಪ್ಪ, ಸಿದ್ದರಾಮಯ್ಯ ಭೇಟಿ ಆತ್ಮಸಾಕ್ಷಿ ಮತ ಪಡೆಯಲಿಕ್ಕಾ ಎಂದು ಕುಟುಕಿದ್ದಾರೆ. ಬಿಜೆಪಿಯನ್ನು ಸೋಲಿಸುವುದೇ ನನ್ನ ಮೊದಲ ಅಜೆಂಡಾ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಜತೆ ಮಾತುಕತೆ ನಡೆಸಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲದ ಬಗ್ಗೆ ಸಿದ್ದರಾಮಯ್ಯ ಹೊರತುಪಡಿಸಿ ಎಲ್ಲಾ ನಾಯಕರು ಒಪ್ಪಿದ್ದಾರೆ. ನೀವು ಬಿಜೆಪಿ ಅಭ್ಯರ್ಥಿ ಸೋಲಬೇಕು ಅಂದರೆ, ನಾವು 32 ಎರಡನೇ ಪ್ರಾಶಸ್ತ್ಯ ಮತ ಕೊಡುತ್ತೇವೆ. ನಿಮ್ಮ ಎರಡನೇ ಅಭ್ಯರ್ಥಿಯ 24 ಪ್ರಾಶಸ್ತ್ಯ ಮತ ನಮಗೆ ಕೊಡಿ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ಅಲ್ಪಸಂಖ್ಯಾತರ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಭಜನೆ ಮಾಡುತ್ತಿದ್ದಾರೆ. ಆದರೆ, 2016ರಲ್ಲಿ ಜೆಡಿಎಸ್ ಪಕ್ಷದ ಶಾಸಕರನ್ನು ಅಪಹರಣ ಮಾಡಿ ನಮ್ಮ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ನಿಂತಿದ್ದ ಬಿ.ಎಂ.ಫಾರೂಕ್ ಅವರನ್ನು ಸೋಲಿಸಿದ್ದು ಯಾರು? ಇದೇ ಸಿದ್ದರಾಮಯ್ಯ. ಫಾರೂಕ್ ಅವರು ಅಲ್ಪಸಂಖ್ಯಾತರಲ್ಲವೆ? ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿ ಆಗಿದ್ದ ಇಕ್ಬಾಲ್ ಅಹಮದ್ ಸರಡಗಿ ಅವರನ್ನು ಸೋಲಿಸಲಿಲ್ಲವೆ? ಸರಡಗಿ ಅವರು ಮುಸ್ಲಿಮರಲ್ಲವೇ? ಎಂದು ಮಾಜಿ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ : – ಸಿದ್ದು ನಿವಾಸಕ್ಕೆ ಚಡ್ಡಿ ತಲುಪಿಸಿದ ಛಲವಾದಿ ನಾರಾಯಣಸ್ವಾಮಿ


ಸಿದ್ದರಾಮಯ್ಯ ಅವರು ತಮ್ಮ ಸ್ವಾರ್ಥಕ್ಕಾಗಿ ಏನನ್ನೂ ಮಾಡಲು ಹೇಸುವುದಿಲ್ಲ. ಈಗಾಗಲೇ ಅವರು ಅಲ್ಪಸಂಖ್ಯಾತರ ಜಪ ಮಾಡುತ್ತಾ ಅನೇಕ ಅಲ್ಪಸಂಖ್ಯಾತರನ್ನು ಮುಗಿಸಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಇವತ್ತಿನ ಪಾಪದ ಸರ್ಕಾರದ ಜನಕ ಸಿದ್ದರಾಮಯ್ಯನವರೇ. ವಿಪಕ್ಷ ನಾಯಕರಾಗಿ, ಗೂಟದ ಕಾರಿನಲ್ಲಿ ಓಡಾಡಲು ಅವತ್ತಿನ ಮೈತ್ರಿ ಸರ್ಕಾರವನ್ನು ತೆಗೆದರು ಎಂದು ವಾಗ್ದಾಳಿ ನಡೆಸಿದ್ರು. ರೈತರ ಸಾಲ ಮನ್ನಾ ಮಾಡಿದ ಬಳಿಕ ನಾನು ಸಿಎಂ ಕುರ್ಚಿಯಿಂದ ಕೆಳಗಿಳಿದೆ. ಅದಕ್ಕಾಗಿಯೇ ಅಮೆರಿಕಗೆ ಹೋಗಿದ್ದೆ. ರೈತರ ಸಾಲ ಮನ್ನಾ ಮಾಡುವ ಗುರಿ ನನ್ನದಾಗಿತ್ತು. ರೈತರ 25 ಸಾವಿರ ಕೋಟಿ ರೂ. ಸಾಲ ಮಾಡಿದ ಬಳಿಕ ಕುರ್ಚಿಯಿಂದ ನೆಮ್ಮದಿಯಾಗಿ ಕೆಳಗಿಳಿದೆ ಎಂದು ಹೇಳಿದರು.


ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರಿಬ್ಬರು ಯಾವ ಉದ್ದೇಶಕ್ಕಾಗಿ ನಿನ್ನೆ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದರು. ಅದು ವಿಐಪಿ ರೂಮಿನಲ್ಲಿ. ಅಲ್ಲಿಗೆ ಯಾರೂ ಹೋಗುವುದಕ್ಕೆ ಸಾಧ್ಯವಿಲ್ಲ. ಹಾಗಿದ್ದರೂ ಈ ಭೇಟಿಯ ದೃಶ್ಯ, ಚಿತ್ರಗಳು ಹೊರಬಂದಿವೆ. ತಮ್ಮ ಹಿಂಬಾಲಕರ ಮೂಲಕವೇ ಪೋಟೋ, ವಿಡಿಯೋ ರಿಲೀಸ್ ಮಾಡಿಸಿದ್ದಾರೆ. ಇದು ಆತ್ಮಸಾಕ್ಷಿಯ ಮತ ಪಡೆಯುವ ಉದ್ದೇಶವೇ ? ಎಂದು ಸಿದ್ದರಾಮಯ್ಯಗೆ ಮಾಜಿ ಸಿಎಂ ಪ್ರಶ್ನಿಸಿದರು.

ಇದನ್ನೂ ಓದಿ : – RSS ಈ ದೇಶಕ್ಕೆ ನೀಡಿರುವ ಕೊಡುಗೆ ಎಲ್ಲರಿಗೂ ಗೊತ್ತಿದೆ – ವಿ. ಸೋಮಣ್ಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!