SANJAY RAUT – ಗಡಿ ವಿವಾದ- ಸಂಜಯ್ ರಾವತ್ ದೇಶ ದ್ರೋಹಿ ಎಂದ ಸಿಎಂ ಬೊಮ್ಮಾಯಿ

ಸಂಜಯ್ ರಾವತ್ ದೇಶ ದ್ರೋಹಿ. ರಾವತ್ ಚೀನಾ ಏಜೆಂಟ್ ಇರಬಹುದೆಂಬ ಅನುಮಾನ ಬರುತ್ತೆ. ಸಂಜಯ್ ರಾವತ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಜಯ್ ರಾವತ್ (Sanjay rawat) ದೇಶ ದ್ರೋಹಿ. ರಾವತ್ ಚೀನಾ ಏಜೆಂಟ್ (China agent) ಇರಬಹುದೆಂಬ ಅನುಮಾನ ಬರುತ್ತೆ. ಸಂಜಯ್ ರಾವತ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj bommai) ಹೇಳಿದರು.

 

ಇದೇ ರೀತಿ ಮಾತನಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಪ್ರಚೋದನೆ ಮಾಡಿದರೆ ಸೈನಿಕರ ರೀತಿಯಲ್ಲೇ ಹಿಮ್ಮೆಟ್ಟಿಸುತ್ತೇವೆ. ಮೊದಲು ಅವರ ರಾಜ್ಯದಲ್ಲಿರುವ ಜನರನ್ನು ರಕ್ಷಣೆ ಮಾಡಲಿ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮಹಾರಾಷ್ಟ್ರ ಸಂಸದ ರಾವತ್ ಮೊನ್ನೆಯಷ್ಟೇ ಜೈಲಿಗೆ ಹೋಗಿದ್ದರು. ಈಗ ರಾವತ್ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಅನ್ನೋದು ರಾವತ್ಗೆ ಗೊತ್ತಿಲ್ವಾ? ಸಂಜಯ್ ರಾವತ್ಗೆ ಮಾನ ಮರ್ಯಾದೆ ಇದ್ಯಾ? ಸಂಜಯ್ ರಾವತ್ಗೆ ನಾಗರಿಕತೆ ಗೊತ್ತಿಲ್ಲ, ಸಂಸ್ಕೃತಿ ಗೊತ್ತಿಲ್ಲ. ಇದನ್ನು ಓದಿ :-  ದಾವಣಗೆರೆಯಲ್ಲಿ ಹಾಡಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!

ನಾಗರಿಕ ಭಾಷೆಯಲ್ಲೇ ನಾವು ಉತ್ತರ ಕೊಡಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddramaiah) ವಾಗ್ದಾಳಿ ನಡೆಸಿದ್ರು. ಈ ನಡುವೆ ಸದನದಲ್ಲಿ ಖಂಡನಾ ನಿರ್ಣಯವನ್ನು ಸಿಎಂ ಬೊಮ್ಮಾಯಿ ಮಂಡಿಸಿದ್ದಾರೆ. ಮಹಾರಾಷ್ಟ್ರದ ನಾಯಕರ ವರ್ತನೆ ಖಂಡಿಸಿ ಖಂಡನಾ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ.

ಇದನ್ನು ಓದಿ :- ವೀರಶೈವ ಲಿಂಗಾಯತ ಸಮುದಾಯ ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿದೆ – ರೇಣುಕಾಚಾರ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!