ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ, ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಧರಣಿಗಿಳಿದ ಕಾಂಗ್ರೆಸ್

ರಾಜ್ಯ ಸರ್ಕಾರ ಸುವರ್ಣಸೌಧ ( SUVARNASOUDHA ) ದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ.

ರಾಜ್ಯ ಸರ್ಕಾರ ಸುವರ್ಣಸೌಧ ( SUVARNASOUDHA ) ದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ( BASAVARAJ BOMMAI ) ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಿದ್ದಾರೆ.

ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಕೂಡ ಇದೇ ವೇಳೆ ಅನಾವರಣ ಮಾಡಲಾಗಿದೆ.
ವೀರ ಸಾವರ್ಕರ್ ಫೋಟೋವನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ( D.K SHIVKUMAR ) ಮಾತನಾಡಿ, ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪ ಅಡ್ಡಿಪಡಿಸಲು ಬಯಸುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನು ಓದಿ : – QR ಕೋಡ್ ಮೂಲಕ ಪೊಲೀಸರು ಹಣ ಪಡೆಯುವ ಬಗ್ಗೆ ಮಾಹಿತಿಯಿದೆ – ಆರಗ ಜ್ಞಾನೇಂದ್ರ

ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಾಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನು ಓದಿ : – ಬಸವರಾಜ ಬೊಮ್ಮಾಯಿ RSS ಕೈಗೊಂಬೆ– ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!