ಕಳೆದ ಎರಡು ದಿನಗಳಿಂದ ಜನ ಸಂಕಲ್ಪ ಯಾತ್ರೆ (Jana sankalpa yathre) ಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಎರಡು ದಿನಗಳಿಂದ ಜನ ಸಂಕಲ್ಪ ಯಾತ್ರೆ ಯಶಸ್ವಿಯಾಗುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ವಿಜಯನಗರ (Vijayanagara) ದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ (Siddaramaiah) ಸಿಎಂ ಆಗಿಬಿಟ್ಟಿದ್ದೀನಿ ಅನ್ನೋ ಭ್ರಮೆಯಲ್ಲಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿಯವರು ಯಡಿಯೂರಪ್ಪನವರನ್ನು ಮುಂದಿಟ್ಟುಕೊಂಡು ಹೋಗುತ್ತಿದ್ದಾರೆ ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ . ನಾವೆಲ್ಲಾ ಒಂದಾಗಿದ್ದೇವೆ, ಎಲ್ಲರೂ ತಂಡಗಳಾಗಿ ಕೆಲಸ ಮಾಡುತ್ತಿದ್ದೇವೆ . ಜೋಡೋ ಯಾತ್ರೆಯಿಂದ ನಾವು ಸಂಕಲ್ಪ ಯಾತ್ರೆ ಮಾಡುತ್ತಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ :- ಚಿಕ್ಕಪೇಟೆ ಸ್ಲಂ ಜನರಿಗೆ ನಾನು ಮನೆ ಕಟ್ಟಿಸಿಕೊಡಲಿದ್ದೇನೆ –ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ – KGF ಬಾಬು