ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೆ.ಸಿ.ವ್ಯಾಲಿ ಮೂಲಕ ಕೋಲಾರ ಜಿಲ್ಲೆಗೆ ಶಾಶ್ವತ ನೀರಿನ ಯೋಜನೆ ಮಾಡಿಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ (Krishnebairegowda) ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು ಹಾಗಾಗಿ ಅವರೆ ಮಾಡಿಕೊಟ್ಟ ಯೋಜನೆ ಮೂಲಕ ನೀರು ತುಂಬಿದ ಕೆರೆ ವೀಕ್ಷಣೆ ಮಾಡಿದ್ದಾರೆ.
ಅವರ ಋಣ ತೀರಿಸುವ ನಿಟ್ಟಿನಲ್ಲಿ ಇಂದು ನರಸಾಪುರಕ್ಕೆ ಬರುವಂತೆ ಮನವಿ ಮಾಡಿದ್ದೇವೆ. ಜಿಲ್ಲೆಯ ಜನರಿಗೆ ಉಸಿರು, ನೀರು ಕೊಟ್ಟವರು ಸಿದ್ದರಾಮಯ್ಯ ಎಂದು ಕೊಂಡಾಡಿದರು. ಪರಿಣಾಮ ಜಿಲ್ಲೆಯಲ್ಲಿಂದು ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ. ಕೆ.ಸಿ.ವ್ಯಾಲಿ ಯೋಜನೆ ಅಲ್ಲದೆ, ಎತ್ತಿನ ಹೊಳೆ ಯೋಜನೆಗೆ ಕೋಟ್ಯಾಂತರ ರೂಪಾಯಿ ಹಣ ನೀಡಿದ್ದಾರೆ. ಇಂತಹ ನೀರು ಕೊಟ್ಟ ಭಗೀರಥ ಸಿದ್ದರಾಮಯ್ಯ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ : – ಗೆಲ್ಲುವ ವಿಶ್ವಾಸ ಇಲ್ಲದೆ ಸಿದ್ದರಾಮಯ್ಯ ಜಾಗ ಹುಡುಕಾಡುತ್ತಿದ್ದಾರೆ -ಯಡಿಯೂರಪ್ಪ