ದಾವಣಗೆರೆ ( DAVANAGERE ) ತಾಲೂಕಿನ ಕುಕ್ಕವಾಡ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ತಗುಲಿ ಐದೂವರೆ ಎಕರೆಯಲ್ಲಿನ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಕುಕ್ಕವಾಡ ಗ್ರಾಮದ ಡಿಬಿ ಶಂಕರ್ಗೆ ಸೇರಿದ 2 ಎಕರೆ ಹಾಗೂ ಬಸವರಾಜು , ಪಾಲಕ್ಷಪ , ಮಂಜುನಾಥ್ಗೆ ಸೇರಿದ 3.5 ಎಕರೆಯಲ್ಲಿನ ಸುಮಾರು 900 ಟನ್ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ : – ಅಂಜನಾದ್ರಿ ಬೆಟ್ಟದ ಕಡೆಗೆ ಹನುಮ ಮಾಲಾಧಾರಿಗಳು…!
ಸುಮಾರು 8 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹೊತ್ತಿಕೊಂಡು ಉರಿಯುತ್ತಿದ್ದ ಬೆಂಕಿಯನ್ನು ಸ್ಥಳೀಯರ ಸಹಾಯದಿಂದ ನಂದಿಸಲಾಗಿದೆ . ಬೆಂಕಿ ಹಾಗೂ ಕೆಂಡವನು ನಂದಿಸುವಾಗ ಕೆಲವರಿಗೆ ಸುಟ್ಟ ಗಾಯಗಳಾಗಿದೆ. ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅವಘಡ ಸಂಭವಿಸಿದೆ ಎಂದು ಬೆಳೆಗಾರರು ಆರೋಪಿಸಿದ್ದಾರೆ.
ಇದನ್ನೂ ಓದಿ : – ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ ಘೋಷಣೆ