ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂಆರ್ ಶಾಗೆ ಹೃದಯಾಘಾತ- ದಿಲ್ಲಿಗೆ ಏರ್ ಲಿಫ್ಟ್

ಸುಪ್ರೀಂಕೋರ್ಟ್ (Supreme court) ಹಾಲಿ ನ್ಯಾಯಮೂರ್ತಿ ಎಂಆರ್ ಶಾ ಅವರಿಗೆ ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತವಾಗಿದೆ(Heart attack) . ಶಾ ಅವರನ್ನು ದಿಲ್ಲಿಗೆ ಏರ್ ಲಿಫ್ಟ್ (Airlift) ಮಾಡಲಾಗುತ್ತಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಸುಪ್ರೀಂಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದ ಜತೆ ಸಂವಹನ ನಡೆಸುತ್ತಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬುಲೆನ್ಸ್ ಮೂಲಕ ದಿಲ್ಲಿಗೆ ಕರೆತರಲಾಗುತ್ತಿದೆ. 64 ವರ್ಷದ ನ್ಯಾ. ಮುಕೇಶ್ ಕುಮಾರ್ ರಸಿಕ್ ಭಾಯ್ ಶಾ (Mukeshkumar rasikbhai shah) ಪಟ್ನಾ ಹೈಕೋರ್ಟ್ (Patna highcourt) ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಗುಜರಾತ್ ಹೈಕೋರ್ಟ್ ನ (Gujrath highcourt) ಮಾಜಿ ನ್ಯಾಯಮೂರ್ತಿಯೂ ಹೌದು. ಅವರು 2023ರ ಮೇ 15ರಂದು ನಿವೃತ್ತರಾಗಲಿದ್ದಾರೆ. 2018ರ ನವೆಂಬರ್ 2ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಅವರು ಪದೋನ್ನತಿ ಹೊಂದಿದ್ದರು.

“ಸುಪ್ರೀಂಕೋರ್ಟ್ ಗೌರವಾನ್ವಿತ ನ್ಯಾಯಮೂರ್ತಿ ಎಂಆರ್ ಶಾ ಅವರು ಹಿಮಾಚಲ ಪ್ರದೇಶದಲ್ಲಿ (Himachala pradesh) ಇದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ದಿಲ್ಲಿಗೆ ತ್ವರಿತವಾಗಿ ಕರೆತರಲು ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : – ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ- ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!