ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ.

ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ (Kalasa banduri) ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ.

ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ (Narendra modi) ಅವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ (Amith shah) ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಜೋಶಿ ಅನಂತ ಧನ್ಯವಾದಗಳು ತಿಳಿಸಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ್ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನು ಓದಿ : – ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ


ಕಾಂಗ್ರೆಸ್ ಜನವರಿ 2 ರಂದು ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ಮಾಡಲು ಸಿದ್ಧತೆ ನಡೆಸಿತ್ತು. ಇದೀಗ, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ದೊರೆತಂತಾಗಿದೆ. ಈ ಮೂಲಕ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಟಾಂಗ್ ನೀಡಿದೆ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು.

ಇದನ್ನು ಓದಿ : – 113 ಬಾರಿ ಭದ್ರತಾ ನಿಯಮಾವಳಿ ಉಲ್ಲಂಘಿಸಿರುವ ರಾಹುಲ್ ಗಾಂಧಿ- CRPF ಮಾಹಿತಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!